BIG NEWS: ಏರ್ ಇಂಡಿಯಾದ ಮೂವರು ಅಧಿಕಾರಿಗಳು ಸಸ್ಪೆಂಡ್

ನವದೆಹಲಿ: ಗುಜರಾತ್ ನ ಅಹಮದಾಅಬಾದ್ ನಲ್ಲಿ ಏರ್ ಇಂಡಿಯಾ ವಿಮಾನ ದುರಂತ ನಡೆದು ಕೆಲ ದಿನಗಳ ಬಳಿಕ ನಾಗರಿಕ ವಿಮಾನಯಾನ ನಿರ್ದೇಶನಾಲಯ ಏರ್ ಇಂಡಿಯಾದ ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸಿದೆ.

ಏರ್ ಇಂಡಿಯಾದ ವಿಭಾಗೀಯ ಉಪಾಧ್ಯಕ್ಷ ಸೇರಿದಂತೆ ಏರ್ ಇಂಡಿಯಾದ ಮೂವರು ಅಧಿಕಾರಿಗಳನ್ನು ಸೇವೆಯಿಂದ ತೆಗೆಯಲಾಗಿದೆ. ಜೂನ್ 20ರಂದು ಡಿಜಿಸಿಎ ತನ್ನ ಆದೇಶದಲ್ಲಿ ಟಾಟಾ ಗ್ರೂಪ್ ಒಡೆತನ ಏರ್ ಇಂಡಿಯಾ ಈ ಅಧಿಕಾರಿಗಳ ವಿರುದ್ಧ ಆಂತರಿಕ ಶಿಸ್ತುಕ್ರಮಗಳನ್ನು ಪ್ರಾರಂಭಿಸುವಂತೆ ಸೂಚನೆ ನೀಡಿತ್ತು.

ಅಹಮದಾಬಾದ್ ವಿಮಾನ ಅಪಘಾತದ ಬಳಿಕ ಏರ್ ಇಂಡಿಯಾದ ಪ್ರಮುಖ ವೇಳಾಪಟ್ಟಿ ಮತ್ತು ಸಿಬ್ಬಂದಿಗಳ ರೋಸ್ಟರಿಂಗ್ ನಲ್ಲಿ ಪದೇ ಪದೇ ಉಲ್ಲಂಘನೆಯಾಗಿದೆ. ಈ ಹಿನ್ನೆಲೆಯಲ್ಲಿ ಏರ್ ಇಂಡಿಯಾದ ಮೂವರು ಉನ್ನತ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read