ತುಮಕೂರು: ತುಮಕೂರು ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲು ಸ್ಯಾಟಲೈಟ್ ಟೌನ್ ಜತೆಗೆ ಇಂಟರ್ಸಿಟಿ ರೈಲು, ಮೆಟ್ರೋ ರೈಲು ನೀಡಲು ಡಿಪಿಆರ್ ಸಿದ್ದಪಡಿಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ತುಮಕೂರಿನ ಸರ್ಕಾರಿ ಜೂನಿಯರ್ ಕಾಲೇಜ್ ಮೈದಾನದಲ್ಲಿ ನಡೆದ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರ 75ನೇ ಜನ್ಮದಿನದ ಅಮೃತ ಮಹೋತ್ಸವದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಬೆಂಗಳೂರಿನಂತೆ ತುಮಕೂರು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದ್ದು, ಅನೇಕ ಯೋಜನೆ ರೂಪಿಸಲಾಗಿದೆ. ಕಲ್ಪತರು ನಾಡು ತುಮಕೂರು ಜಿಲ್ಲೆಗೆ ತನ್ನದೇ ಆದ ಇತಿಹಾಸವಿದ್ದು, ಧಾರ್ಮಿಕ, ಶೈಕ್ಷಣಿಕವಾಗಿ ದೊಡ್ಡ ಪರಂಪರೆ ಹೊಂದಿದೆ. ತುಮಕೂರಿಗೆ ಹೆಚ್ಚಿನ ಶಕ್ತಿ ನೀಡಲು ಸ್ಯಾಟಲೈಟ್ ಟೌನ್ ಜತೆಗೆ ಇಂಟರ್ಸಿಟಿ ರೈಲು, ಮೆಟ್ರೋ ರೈಲು ನೀಡಲು ಡಿಪಿಆರ್ ಸಿದ್ದಪಡಿಸಲಾಗುತ್ತಿದೆ ಎಂದು ಹೇಳಿದ್ದಾರೆ.