ಶಾಸಕರ ಜೇಬಿನಿಂದಲೇ ಹಣ ಎಗರಿಸಿದ್ದ ಕಳ್ಳ ವಶಕ್ಕೆ

ರಾಯಚೂರು: ಶಾಸಕರ ಜೇಬಿನಿಂದ 70 ಸಾವಿರ ರೂ. ನಗದು ಎಗರಿಸಿದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

 ರಾಯಚೂರು ನಗರದ ಕೃಷಿ ವಿವಿ ಕ್ರೀಡಾಂಗಣದಲ್ಲಿ ಶನಿವಾರ ಸಣ್ಣ ನೀರಾವರಿ ಸಚಿವ ಎನ್.ಎಸ್. ಭೋಸರಾಜ್ ಅವರ ಹುಟ್ಟು ಹಬ್ಬದ ಅಂಗವಾಗಿ ಅಭಿನಂದನಾ ಗ್ರಂಥ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಲಿಂಗಸುಗೂರು ಶಾಸಕ ಡಿ.ಎಸ್. ಹುಲಗೇರಿ ಅವರ ಜೇಬಿಗೆ ಕೈ ಹಾಕಿ 70 ಸಾವಿರ ರೂ. ನಗದು ಹಾಗೂ ಶಾಸಕರ ಬೆಂಬಲಿಗರೊಬ್ಬರ ಚಿನ್ನದ ಸರ ಎಗರಿಸಿದ ವ್ಯಕ್ತಿ ಸಿಕ್ಕಿಬಿದ್ದಿದ್ದಾನೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಕಾರ್ಯಕ್ರಮ ಮುಗಿದ ನಂತರ ಶಾಸಕರು ಸೇರಿದಂತೆ ಗಣ್ಯರಿಗೆ ಊಟದ ವ್ಯವಸ್ಥೆ ಮಾಡಿದ ಸ್ಥಳಕ್ಕೆ ನುಗ್ಗಿದ ವ್ಯಕ್ತಿಯೊಬ್ಬ ಹಣ ಎಗರಿಸಿದ್ದು, ತಕ್ಷಣ ಎಚ್ಚೆತ್ತುಕೊಂಡ ಶಾಸಕ ಹುಲಗೇರಿ ಆತನ ಕೈ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read