ಬೆಂಗಳೂರು: ಮೈಸೂರು ಭಾಗದ ಬಿಜೆಪಿ ನಾಯಕ ಕೃಷ್ಣನಾಯಕ್ ಬಿಜೆಪಿಗೆ ಗುಡ್ ಬೈ ಹೇಳಿ ಇಂದು ಜೆಡಿಎಸ್ ಗೆ ಸೇರ್ಪಡೆಯಾಗಿದ್ದಾರೆ.
2023ರ ಚುನಾವಣೆಯಲ್ಲಿ ಹೆಚ್.ಡಿ.ಕೋಟೆ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಸೋತಿದ್ದ ಕೃಷ್ಣನಾಯಕ್ ಇಂದು ಅಧಿಕೃತವಾಗಿ ಜೆಡಿಎಸ್ ಗೆ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಮೈಸೂರು ಭಾಗದಲ್ಲಿ ಚಿಗುರೊಡೆದಿದ್ದ ಕಮಲವನ್ನು ಜೆಡಿಎಸ್ ಚಿವುಟಿ ಹಾಕಿದಂತಾಗಿದೆ.
ಬೆಂಗಳೂರಿನಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸಮ್ಮುಖದಲ್ಲಿ ಕೃಷ್ಣನಾಯಕ್ ಜೆಡಿಎಸ್ ಗೆ ಸೇರ್ಪಡೆಯಾಗಿದ್ದಾರೆ. ಇದೇ ವೇಳೆ ಕೃಷ್ಣನಾಯಕ್ ಬೆಂಬಲಿಗರು ಕೂಡ ಜೆಡಿಎಸ್ ಗೆ ಸೇರ್ಪಡೆಯಾಗಿದ್ದಾರೆ.