ವಿಜಯನಗರ: ಚೆಕ್ ಡ್ಯಾಂ ನಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾಅವನ್ನಪ್ಪಿರುವ ಘಟನೆ ವಿಜಯನಗರದಲ್ಲಿ ನಡೆದಿದೆ.
ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಕಾರಿಗನೂರು ಬಳಿ ಚೆಕ್ ಡ್ಯಾಂ ನಲ್ಲಿ ಈಜಲು ಹೋಗಿದ್ದ ವೇಳೆ ಈ ದುರಂತ ಸಂಭವಿಸಿದೆ. ಅರವಿಂದ್ ಹಾಗೂ ಹನುಮಂತ ಮೃತ ಬಾಲಕರು.
ಚೆಕ್ ಡ್ಯಾಂ ನಲ್ಲಿ ನೀರಿನ ಸೆಳೆತಕ್ಕೆ ಇಬ್ಬರು ಬಾಲಕರು ಕೊಚ್ಚಿ ಹೋಗಿ ಸಾವನ್ನಪ್ಪಿದ್ದಾರೆ. ಹೊಸಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.