ದೇವನಹಳ್ಳಿ: ತಾಯಿ-ಮಗಳು ಕೃಷಿ ಹೊಂಡದಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ನಡೆದಿದೆ.
ಇಲ್ಲಿನ ಇಂಡ್ರಸನಹಳ್ಳಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಮಹಿಳೆ ಮಾಲ ಹಾಗೂ ಮಗಳು ಅನುಶ್ರೀ ಶವ ಕೃಷಿ ಹೊಂಡದಲ್ಲಿ ಪತ್ತೆಯಾಗಿದೆ. ಜಮೀನು ಭಾಗ ಕೇಳಿದ್ದಕ್ಕೆ ಗಂಡನಿಂದಲೇ ಕೊಲೆ ಶಂಕೆ ವ್ಯಕ್ತವಾಗಿದೆ.
ಮಲಾ ಪತಿಯೇ ಮಾಲಾ ಹಾಗೂ ಮಗಳನ್ನು ಹತ್ಯೆಗೈದು ಕೃಷಿ ಹೊಂಡಕ್ಕೆ ಎಸೆದಿದ್ದಾನೆ ಎಂದು ಮಾಲಾ ಪೋಷಕರು ಆರೋಪಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.