ಮಂಗಳೂರು: ಯುವಕ, ಯುವತಿ ವಿಷ ಸೇವಿಸಿ ಅಸ್ವಸ್ಥರಾದ ಘಟನೆ ಭಾನುವಾರ ನೆಲ್ಯಾಡಿ ಕೊಕ್ಕಡ ಸಮೀಪ ನಡೆದಿದೆ.
ಬೆಂಗಳೂರು ಮೂಲದ ಯುವಕ ಮತ್ತು ಯುವತಿ ಜೂನ್ 22 ರಂದು ಬೆಳಗ್ಗೆ ಧರ್ಮಸ್ಥಳದಿಂದ ಬಸ್ ನಲ್ಲಿ ಕೊಕ್ಕಡಕ್ಕೆ ಬಂದಿದ್ದಾರೆ. ಅಲ್ಲಿಂದ ಕೊಕ್ಕಡ -ಪೆರಿಯಶಾಂತಿ ರಾಜ್ಯ ಹೆದ್ದಾರಿ ಮೂಲಕ ನಡೆದುಕೊಂಡು ಹೋಗಿದ್ದು, ಸಮೀಪದ ಅರಣ್ಯದೊಳಗೆ ಹೋಗಿ ವಿಷ ಸೇವಿಸಿದ್ದಾರೆ.
ನಂತರ ಹೆದ್ದಾರಿ ಪಕ್ಕಕ್ಕೆ ಬಂದಿದ್ದ ಅವರು ಅಸ್ವಸ್ಥರಾಗಿರುವುದನ್ನು ಕಂಡ ಸ್ಥಳೀಯರು ವಿಚಾರಿಸಿದ್ದಾರೆ. ಈ ವೇಳೆ ಇಬ್ಬರೂ ವಿಷ ಸೇವಿಸಿರುವುದು ಗೊತ್ತಾಗಿದೆ. ಕೂಡಲೇ ಇಬ್ಬರನ್ನು ಸ್ಥಳೀಯರು ನೆಲ್ಯಾಡಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದು, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ, ಅಲ್ಲಿಂದ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ.