ಅರಣ್ಯದೊಳಗೆ ಹೋಗಿ ವಿಷ ಸೇವಿಸಿದ ಯುವಕ, ಯುವತಿ ಚಿಂತಾಜನಕ

ಮಂಗಳೂರು: ಯುವಕ, ಯುವತಿ ವಿಷ ಸೇವಿಸಿ ಅಸ್ವಸ್ಥರಾದ ಘಟನೆ ಭಾನುವಾರ ನೆಲ್ಯಾಡಿ ಕೊಕ್ಕಡ ಸಮೀಪ ನಡೆದಿದೆ.

ಬೆಂಗಳೂರು ಮೂಲದ ಯುವಕ ಮತ್ತು ಯುವತಿ ಜೂನ್ 22 ರಂದು ಬೆಳಗ್ಗೆ ಧರ್ಮಸ್ಥಳದಿಂದ ಬಸ್ ನಲ್ಲಿ ಕೊಕ್ಕಡಕ್ಕೆ ಬಂದಿದ್ದಾರೆ. ಅಲ್ಲಿಂದ ಕೊಕ್ಕಡ -ಪೆರಿಯಶಾಂತಿ ರಾಜ್ಯ ಹೆದ್ದಾರಿ ಮೂಲಕ ನಡೆದುಕೊಂಡು ಹೋಗಿದ್ದು, ಸಮೀಪದ ಅರಣ್ಯದೊಳಗೆ ಹೋಗಿ ವಿಷ ಸೇವಿಸಿದ್ದಾರೆ.

ನಂತರ ಹೆದ್ದಾರಿ ಪಕ್ಕಕ್ಕೆ ಬಂದಿದ್ದ ಅವರು ಅಸ್ವಸ್ಥರಾಗಿರುವುದನ್ನು ಕಂಡ ಸ್ಥಳೀಯರು ವಿಚಾರಿಸಿದ್ದಾರೆ. ಈ ವೇಳೆ ಇಬ್ಬರೂ ವಿಷ ಸೇವಿಸಿರುವುದು ಗೊತ್ತಾಗಿದೆ. ಕೂಡಲೇ ಇಬ್ಬರನ್ನು ಸ್ಥಳೀಯರು ನೆಲ್ಯಾಡಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದು, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ, ಅಲ್ಲಿಂದ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read