ಹಾಸನ: ಹಾಸನದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಒಂದೇ ತಿಂಗಳಿನಲ್ಲಿ 12 ಮಂದಿ ಬಲಿಯಾಗಿದ್ದಾರೆ.
ಹಾಸನ ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ಟೀ ಕ್ಯಾಂಟೀನ್ ನಡೆಸುತ್ತಿದ್ದ ನಿಶಾದ್ (35) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಹಾಗೂ ಮತ್ತೊಂದು ಕಡೆ ಹಾಸನ ನಗರದ ಸತ್ಯಮಂಗಲ ಬಡಾವಣೆಯಲ್ಲಿ ಯುವಕ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.
ಹಾಸನ ನಗರದ ಸತ್ಯಮಂಗಲ ಬಡಾವಣೆಯಲ್ಲಿ ೩೫ ವರ್ಷದ ಚೇತನ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಕಿಕ್ಕೇರಿ ಮೂಲದ ಚೇತನ್ ಹಳೇ ಬಸ್ ನಿಲ್ದಾಣದ ಬಳಿ ಮೊಬೈಲ್ ಅಂಗಡಿ ಇಟ್ಟುಕೊಂಡಿದ್ದರು. ಸತ್ಯಮಂಗಲ ಬಡಾವಣೆಯಲ್ಲಿ ಪತ್ನಿ ಹಾಗೂ ಮಗುವಿನೊಂದಿಗೆ ವಾಸವಾಗಿದ್ದರು.ಅಂಗಡಿ ಬಾಗಿಲು ಹಾಕಿ ರಾತ್ರಿ ಮನೆಗೆ ಬಂದ ಚೇತನ್ ಪತ್ನಿ ಹಾಗೂ ಮಗುವಿನೊಂದಿಗೆ ಊಟಕ್ಕೆ ಕುಳಿತಿದ್ದರು. ಈ ವೇಳೆ ಚೇತನ್ ಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು, ಕೆಳಗೆ ಕುಳಿತಿದ್ದವರು ಮೇಲೆ ಏಳಲಾಗದೇ ಕುಸಿದುಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಹಾಸನ ಜಿಲ್ಲೆಯಲ್ಲಿ ಸಾಲು ಸಾಲು ಹೃದಯಾಘಾತ ಪ್ರಕರಣಗಳು ಕಂಡು ಬಂದಿದೆ. ಒಂದೇ ತಿಂಗಳಿನಲ್ಲಿ 12 ಮಂದಿ ಬಲಿಯಾಗಿದ್ದಾರೆ.