BIG NEWS: ಕೃಷ್ಣಾನದಿ ಪ್ರವಾಹ: ಬೆಳಗಾವಿಯಲ್ಲಿ 7 ಸೇತುವೆಗಳು ಮುಳುಗಡೆ; ಗ್ರಾಮಸ್ಥರ ಪರದಾಟ

ಬೆಳಗಾವಿ: ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗುತ್ತಿದ್ದು, ಕೃಷ್ಣನದಿಯಲ್ಲಿ ಒಳಹರಿವು ಹೆಚ್ಚಳವಾಗಿದೆ. ಪರಿಣಾಮ ಬೆಳಗಾವಿಯಲ್ಲಿ ಹಲವೆಡೆ ಸೇತುವೆಗಳು ಜಲಾವೃತಗೊಂಡಿದ್ದು, ಪ್ರವಾಹ ಭೀತಿ ಎದುರಾಗಿದೆ.

ಕೃಷ್ಣಾನದಿ, ವೇದಗಂಗಾ, ದೂದಗಂಗಾ ನದಿಗಳ ಅಬ್ಬರಕ್ಕೆ ಬೆಳಗಾವಿಯ ಚಿಕ್ಕೋಡಿ ಭಾಗದ 7 ಸೇತುವೆಗಳು ಮುಳುಗಡೆಯಾಗಿದ್ದು, ಹಲವು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ದೂದಗಂಗಾ ನದಿಯಿಂದಾಗಿ ಮಲ್ಲಿಕವಾಡ-ದತ್ತವಾಡ ಸೇತುವೆ, ಭೋಜ-ಕಾರದಗಾ ಗ್ರಾಮಗಳ ಸಂಪರ್ಕ ಸೇತುವೆ ಸಂಪೂರ್ಣ ಜಲಾವೃತಗೊಂಡಿವೆ. ವೇದಗಂಗಾ ನದಿಯಿಂದಾಗಿ ಭಾರವಾಡ-ಕುನ್ನೂರು, ಭೋಜವಾಡಿ-ಕುನ್ನೂರು, ಅಕ್ಕೋಳ-ಸಿದ್ನಾಳ ಗ್ರಾಮಗಳ ಸಂಪರ್ಕ ಸೇತುವೆ ಮುಳುಗಡೆಯಾಗಿವೆ.

ಕೃಷ್ಣಾನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಪರಿಣಾಮ ಯಡೂರು-ಕಲ್ಲೋಳ, ಭಾವನಸೌಂದತ್ತಿ-ಮಾಂಜರಿ ಸಂಪರ್ಕ ಸೇತುವೆ ಜಲಾವೃತಗೊಂಡಿದ್ದು, ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ಪರ್ಯಾಯ ಮಾರ್ಗಕ್ಕಾಗಿ ಜನರು ಪರದಾಡುತ್ತಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read