ನವದೆಹಲಿ : ದೆಹಲಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾದ ಸಿಎಂ ಸಿದ್ದರಾಮಯ್ಯ ಬಾಕಿ ಇರುವ ವಿಧೇಯಕಗಳ ಬಗ್ಗೆ ಸಮಾಲೋಚನೆ ನಡೆಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಗೌರವಾನ್ವಿತ ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ, ಅನುಮೋದನೆಗೆ ಬಾಕಿ ಇರುವ ವಿಧೇಯಕಗಳ ಬಗ್ಗೆ ಸಮಾಲೋಚನೆ ನಡೆಸಿದರು.
ಈ ವೇಳೆ ಮುಖ್ಯಮಂತ್ರಿಗಳು ರಾಷ್ಟ್ರಪತಿಗಳಿಗೆ ಮೈಸೂರು ಪೇಟ ಹಾಗೂ ಶ್ರೀಗಂಧದ ಸ್ಮರಣಿಕೆ ನೀಡಿ ಗೌರವಿಸಿದರು. ಸಚಿವರಾದ ಕೆ.ಜೆ.ಜಾರ್ಜ್, ಹೆಚ್.ಸಿ.ಮಹದೇವಪ್ಪ, ಸತೀಶ್ ಜಾರಕಿಹೊಳಿ, ಸರ್ಕಾರದ ಮುಖ್ಯಕಾರ್ಯದರ್ಶಿಗಳಾದ ಡಾ|| ಶಾಲಿನಿರಜನೀಶ್ ಅವರು ಈ ವೇಳೆ ಉಪಸ್ಥಿತರಿದ್ದರು.
ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ಗೌರವಾನ್ವಿತ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ, ಅನುಮೋದನೆಗೆ ಬಾಕಿ ಇರುವ ವಿಧೇಯಕಗಳ ಬಗ್ಗೆ ಸಮಾಲೋಚನೆ ನಡೆಸಿದೆ.
— Siddaramaiah (@siddaramaiah) June 24, 2025
ಈ ವೇಳೆ ರಾಜ್ಯದ ಹೆಮ್ಮೆಯ ಗುರುತಾದ ಮೈಸೂರು ಪೇಟ ಹಾಗೂ ಶ್ರೀಗಂಧದ ಸ್ಮರಣಿಕೆ ನೀಡಿ ಗೌರವಿಸಿದೆ. pic.twitter.com/ZhMNCf1tJ5