ಶಾಲಾ ಮಕ್ಕಳ ಶೂ, ಸಾಕ್ಸ್ ಹಣ ಗುಳುಂ: ಮುಖ್ಯ ಶಿಕ್ಷಕ ಅಮಾನತು

ಬೀದರ್: ಸರ್ಕಾರಿ ಶಾಲೆ ಮಕ್ಕಳ ಶೂ, ಸಾಕ್ಸ್ ಹಣ ಗುಳುಂ ಮಾಡಿರುವುದು ಸೇರಿದಂತೆ ಹಲವು ಭ್ರಷ್ಟಾಚಾರ ಎಸಗಿದ ಆರೋಪದ ಮೇರೆಗೆ ಬೀದರ್ ಜಿಲ್ಲೆ ಔರಾದ್ ನ ಕೊಳ್ಳುರ ಗ್ರಾಮದ ಶಾಲೆಯ ಮುಖ್ಯ ಶಿಕ್ಷಕನನ್ನು ಅಮಾನತು ಮಾಡಲಾಗಿದೆ.

ಮುಖ್ಯ ಶಿಕ್ಷಕ ಸುರೇಶ ಪಾಂಡ್ರೆ ಅಮಾನತು ಮಾಡಲಾಗಿದೆ. ಶಾಲಾ ಮಕ್ಕಳಿಗೆ ಕಳಪೆ ಗುಣಮಟ್ಟದ ಶೂ, ಸಾಕ್ಸ್ ಗಳನ್ನು ವಿತರಿಸಿದ್ದರು. ಅತಿಥಿ ಶಿಕ್ಷಕರ ನೇಮಕಾತಿಗೆ ಲಂಚ ಪಡೆದಿದ್ದರು. 2024 ರಿಂದ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು ವಿತರಿಸಿರಲಿಲ್ಲ. ಸರ್ಕಾರಿ ಲ್ಯಾಪ್ಟಾಪ್ ಅನ್ನು ಮನೆಯಲ್ಲಿ ಇಟ್ಟುಕೊಂಡಿದ್ದರು. ಹೀಗೆ ಕರ್ತವ್ಯ ಲೋಪ, ಭ್ರಷ್ಟಾಚಾರ ಎಸಗಿದ ಹಿನ್ನೆಲೆಯಲ್ಲಿ ಮುಖ್ಯ ಶಿಕ್ಷಕ ಸುರೇಶ್ ಪಾಂಡ್ರೆ ಅವರನ್ನು ಅಮಾನತು ಮಾಡಿ ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಡಾ. ಗಿರೀಶ ಬದೋಲೆ ಆದೇಶ ಹೊರಡಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read