ಕಲಬುರಗಿ : ಕಲಬುರಗಿಯಲ್ಲಿ ತ್ರಿಬಲ್ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಮಂದಿ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
ಕಲಬುರಗಿ ಹೊರವಲಯದ ಪಟ್ನಾ ಗ್ರಾಮದ ಬಳಿ ಮಾರಕಾಸ್ತ್ರಗಳಿಂದ ಕೊಚ್ಚಿ ಮೂವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. . ಸಿದ್ಧಾರೂಢ(32), ಜಗದೀಶ(25), ರಾಮಚಂದ್ರ(35) ಕೊಲೆಯಾದವರು .ಈರಣ್ಣ ತಾಳಿಕೋಟೆ, ರಾಚಣ್ಣ ಸೇರಿ ಏಳು ಮಂದಿ ಆರೋಪಿಗಳನ್ನು ಸಬ್ ಅರ್ಬನ್ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
ಹಳೆ ವೈಷಮ್ಯದಿಂದ ಮೂವರನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಡಾಬಾಗೆ ನುಗ್ಗಿ ಮಾರಕಾಸ್ತ್ರಗಳಿಂದ ಕೊಚ್ಚಿ ಡಾಬಾದಲ್ಲಿ ಕೆಲಸ ಮಾಡುತ್ತಿದ್ದ ಮೂವರನ್ನು ಕೊಲೆ ಮಾಡಲಾಗಿದೆ.
You Might Also Like
TAGGED:ತ್ರಿಬಲ್ ಮರ್ಡರ್