BREAKING : ಬೆಂಗಳೂರಲ್ಲಿ ಮತ್ತೊಂದು ದರೋಡೆ : ಹಾಡಹಗಲೇ ಚಾಕು ತೋರಿಸಿ, ಬೆದರಿಸಿ 2 ಕೋಟಿ ನಗದು ದೋಚಿದ ದುಷ್ಕರ್ಮಿಗಳು.!

ಬೆಂಗಳೂರು : ಬೆಂಗಳೂರಿನಲ್ಲಿ ದುಷ್ಕರ್ಮಿಗಳು ಹಾಡಹಗಲೇ ಎರಡು ಕೋಟಿ ರೂಪಾಯಿ ದರೋಡೆ ಮಾಡಿರುವ ಘಟನೆ ಜೂನ್ 25ರಂದು ನಡೆದಿದ್ದು, ಘಟನೆ ಇದೀಗ ತಡವಾಗಿ ಬೆಳಕಿಗೆ ಬಂದಿದೆ. ಜೂನ್ 25ರಂದು ಬೆಂಗಳೂರಿನ ವಿದ್ಯಾರಣ್ಯಪುರಂನ ಎಂ ಎಸ್ ಪಾಳ್ಯದಲ್ಲಿ ಈ ಘಟನೆ ನಡೆದಿದೆ.

ಘಟನೆ ಹಿನ್ನೆಲೆ
ಕೆಂಗೇರಿ ನಿವಾಸಿ ಶ್ರೀಹರ್ಷ ಎರಡು ಕೋಟಿ ರೂಪಾಯಿ ಹಣ ಕಳೆದುಕೊಂಡ ವ್ಯಕ್ತಿ.USDT ಗೆ ಹಣ ಕನ್ವರ್ಟ್ ಮಾಡಿಸಿಕೊಳ್ಳಲು ಬಂದ ಹರ್ಷನಿಂದ ಖದೀಮರು 2 ಕೋಟಿ ರೂಪಾಯಿ ದೋಚಿದ್ದಾರೆ.ಶ್ರೀಹರ್ಷರ ಹೊಸ ಜಪಾನ್ ಕಂಪನಿಗೆ ಯಂತ್ರವೊಂದು ಬೇಕಾಗಿರುತ್ತದೆ. ಯುಎಸ್ಡಿಟಿಗೆ ಹಣ ಕನ್ವರ್ಟ್ ಮಾಡಿಸಲು ಶ್ರೀ ಹರ್ಷ ಬಂದಿದ್ದರು.

ಎ.ಕೆ ಎಂಟರ್ಪ್ರೈಸ್ ಶಾಪ್ ನಲ್ಲಿ ಶ್ರೀಹರ್ಷ ಮತ್ತು ಸ್ನೇಹಿತ ಬೆಂಜಮೀನ್ ಭೇಟಿಯಾಗಿದ್ದರು. ಬಳಿಕ ಬೆಂಚ ಮೀನ್ ಮತ್ತು ಇಬ್ಬರು ಸ್ನೇಹಿತರು ಹಣ ಎಣಿಕೆ ಮಾಡುತ್ತಿದ್ದರು. ಈ ವೇಳೆ ಏಳು ಮಂದಿ ಗುಂಪು ಎಕಾಏಕಿ ಶಾಪ್ ಗೆ ನುಗ್ಗಿದೆ. ಚಾಕು ಹಿಡಿದು ಶ್ರೀ ಹರ್ಷ ಮೇಲೆ ಹಲ್ಲೆ ನಡೆಸಿದ್ದಾರೆ. ಶ್ರೀಹರ್ಷ ಕುತ್ತಿಗೆಗೆ ಚಾಕು ಇಟ್ಟು ಬೆದರಿಸಿ ಎರಡು ಕೋಟಿ ಹಣ ದೋಚಿ ಎಸ್ಕೇಪ್ ಆಗಿದ್ದಾರೆ. ಶಾಪ್ ನಲ್ಲಿದ್ದ ಶ್ರೀಹರ್ಷ ಮತ್ತು ಬೆಂಜಮೀನ್ ಹಾಗೂ ಅವರ ಸ್ನೇಹಿತರನ್ನು ಕೂಡಿಹಾಕಿ ಪರಾರಿಯಾಗಿದ್ದಾರೆ. ಈ ಕುರಿತು ವಿದ್ಯಾರಣ್ಯಪುರಂ ಪೊಲೀಸ್ ಠಾಣೆಗೆ ಶ್ರೀ ಹರ್ಷ ದೂರು ನೀಡಿದ್ದಾರೆ. ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read