ದಾವಣಗೆರೆ: ದಾವಣಗೆರೆಯಲ್ಲಿ ವಂದೇ ಭಾರತ್ ರೈಲಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ವಂದೇ ಭಾರತ್ ರೈಲಿನ ಚಕ್ರದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ.
ಚಕ್ರದಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ ವಂದೇ ಭಾರತ್ ರೈಲು ಕೆಟ್ಟು ನಿಂತಿದೆ. ಚಕ್ರಕ್ಕೆ ಬೆಂಕಿ ಹೊತ್ತಿರುವುದನ್ನು ನೋಡಿದ ಗೇಟ್ ಮ್ಯಾನ್ ಮಾಹಿತಿ ನೀಡಿದ್ದಾರೆ. ರೈಲ್ವೆ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ದುರಂತ ತಪ್ಪಿದೆ. ಧಾರವಾಡದಿಂದ ಬೆಂಗಳೂರಿಗೆ ಹೊರಟಿದ್ದ ರೈಲನ್ನು ದಾವಣಗೆರೆಯಲ್ಲಿ ನಿಲುಗಡೆ ಮಾಡಲಾಗಿದೆ.
ರೈಲಿನಲ್ಲಿದ್ದ ಎಲ್ಲಾ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಶತಾಬ್ದಿ ಎಕ್ಸ್ಪ್ರೆಸ್ ರೈಲಿನಲ್ಲಿ ದಾವಣಗೆರೆಯಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದಾರೆ.
(ಸಾಂದರ್ಭಿಕ ಚಿತ್ರ)