ಮಂಗಳೂರು: ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಹತ್ಯೆಯಲ್ಲಿ ಭಾಗಿಯಾದ ಬಹುತೇಕರಿಗೆ ನಿಷೇಧಿತ ಪಿಎಫ್ ಐ ನಂಟು ಇತ್ತು ಎಂದು ತನಿಖೆಯಲ್ಲಿ ತಿಳಿದುಬಂದಿದೆ.
ಎನ್ ಐಎ ತನಿಖೆಯ ವೇಳೆ ಹತ್ಯೆ ಆರೋಪಿಗಳಿಗೆ ನಿಷೇಧಿತ ಪಿಎಫ್ ಐ ಜೊತೆ ನಂಟಿತ್ತು ಎಂಬ ಬಗ್ಗೆ ಸಾಕ್ಷ್ಯ ಲಭ್ಯವಗಿದೆ. ಕೇಸ್ ನಲ್ಲಿ ಬಂಧಿತರ ಬ್ಯಾಂಕ್ ಖಾತೆಗಳಿಗೆ ಹಣ ಹೋಗಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಎನ್ ಐಎ ತಂಡ ಫಂಡಿಂಗ್ ಪಾಯಿಂಟ್ ತನಿಖೆಗೆ ಇಳಿದಿದೆ.
ಬಂಧಿತ ಆರೋಪಿಗಳ ಬ್ಯಾಂಕ್ ಖಾತೆಗಳಿಗೆ ವಿದೇಶಿ ಫಂಡಿಂಗ್ ಬಗ್ಗೆ ಪತ್ತೆಯಾಗಿದ್ದು, 12 ಆರೋಪಿಗಳ ಬ್ಯಾಂಕ್ ಖಾತೆ ವಿವರವನ್ನು ತನಿಖಾ ತಂಡ ಸಂಗ್ರಹಿಸಿದೆ ಎಂದು ತಿಳಿದುಬಂದಿದೆ