BIG NEWS: ಕೆಪಿಸಿಸಿ ಅಧ್ಯಕ್ಷರಾಗಲಿದ್ದಾರಾ ಸತೀಶ್ ಜಾರಕಿಹೊಳಿ? ಸಚಿವ ರಾಜಣ್ಣ ಹೇಳಿದ್ದೇನು?

ತುಮಕೂರು: ಸೆಪ್ಟೆಂಬರ್ ನಲ್ಲಿ ರಾಜಕೀಯ ಬದಲಾವಣೆ ಬಗ್ಗೆ ಭವಿಷ್ಯ ನುಡಿದಿರುವ ಸಚುವ ಕೆ.ಎನ್.ರಾಜಣ್ಣ, ಇದೀಗ ಮತ್ತೊಂದು ಹೇಳಿಕೆ ನೀಡಿದ್ದಾರೆ.

ತುಮಕೂರಿನಲ್ಲಿ ಮಾತನಾಡಿದ ಸಚಿವ ರಾಜಣ್ಣ, ಸಚಿವ ಸಂಪುಟ ಪುನಾರಚನೆ ವಿಚಾರವಾಗಿ ಮಾತನಾಡುತ್ತಾ, ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆಯಾಗುವುದು, ಬಿಡುವುದು ಹೈಕಮಾಂಡ್ ಗೆ ಬಿಟ್ಟ ವಿಚಾರ. ಬದಲಾವಣೆಯಂತೂ ಆಗುತ್ತದೆ. ಆದರೆ ಯಾವಾಗ ಆಗುತ್ತದೆ ಎಂಬುದು ಗೊತ್ತಿಲ್ಲ ಎಂದರು.

ಸತೀಶ್ ಜಾರಕಿಹೊಳಿಯವರು ಕೆಪಿಸಿಸಿ ಅಧ್ಯಕ್ಷರಾಗಬಹುದು ಅಂದುಕೊಂಡಿದ್ದೇನೆ. ಅವರೇ ಅಗಬಹುದು. ಆದರೆ ಎಲ್ಲವನ್ನೂ ಕಾಲ ತೀರ್ಮಾನ ಮಾಡುತ್ತದೆ ಎಂದು ಹೇಳಿದ್ದಾರೆ.

ಇನ್ನು ಮಧುಗಿರಿ ಪ್ರತ್ಯೇಕ ಜಿಲ್ಲೆ ವಿಚಾರವಾಗಿ, ಮಧುಗಿರಿಯನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಈ ಅವಧಿಯಲ್ಲಿಯೇ ಮಾಡುತ್ತೇನೆ. ತುಮಕೂರು ಜಿಲ್ಲೆಯನ್ನು ಮೂರು ಜಿಲ್ಲೆಗಳನ್ನಾಗಿ ಮಾಡಬಹುದು. ಧಾರವಾಡವನ್ನು ಮೂರು ಜಿಲ್ಲೆ ಮಾಡಿದ ಹಾಗೇ ತುಮಕೂರನ್ನೂ ತಿಪಟೂರು, ಮಧುಗಿರಿ, ತುಮಕೂರು ಎಂದು ಮೂರು ಜಿಲ್ಲೆ ಮಾಡಬಹುದು ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read