ತುಮಕೂರು: ಚಲಿಸುತ್ತಿದ್ದ ಬಸ್ ನ ಟೈಯರ್ ಬ್ಲಾಸ್ಟ್ ಆಗಿದ್ದು, ಮಿಂಚಿನ ವೇಗದಲ್ಲಿ ಬಂದು ಮನೆಗೆ ನುಗ್ಗಿದ ಘಟನೆ ತುಮಕೂರು ಜಿಲ್ಲೆ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ.
ತುಮಕೂರಿನಿಂದ ಕೋಲಾರ ಕಡೆಗೆ ತೆರಳುತ್ತಿದ್ದ ಬಸ್ ನ ಟೈಯರ್ ಬರ್ಸ್ಟ್ ಆಗಿದೆ. ಅದೃಷ್ಟವಶಾತ್ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ರಾಷ್ಟ್ರೀಯ ಹೆದ್ದಾರಿ 206 ಬಳಿ ಘಟನೆ ನಡೆದಿದೆ. ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಮನೆಯ ಗೋಡೆಗೆ ಭಾರೀ ಪ್ರಮಾಣದಲ್ಲಿ ಹಾನಿಯಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.