ಬಳ್ಳಾರಿ: ಡಿಸೆಂಬರ್ ನಲ್ಲಿ ಬಳ್ಳಾರಿಯಲ್ಲಿ ನಡೆಯಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಲೇಖಕಿ ಹಾಗೂ ಅಂತರಾಷ್ಟ್ರೀಯ ಮಟ್ಟದ ಬೂಕರ್ ಪ್ರಶಸ್ತಿ ಪುರಸ್ಕೃತರಾದ ಬಾನುಮುಷ್ಕಾಕ್ ಅವರನ್ನು ಆಯ್ಕೆ ಮಾಡಲಾಗಿದೆ.
ಭಾನುವಾರ ಬಳ್ಳಾರಿಯಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಬಾನುಮಸ್ತಾಕ್ ಅವರ ಹೆಸರನ್ನು ಘೋಷಣೆ ಮಾಡಲಾಗಿದೆ.
ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಮಹೇಶ್ ಜೋಶಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಮ್ಮೇಳನ ಅಧ್ಯಕ್ಷರಾಗಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡುವ ಬಗ್ಗೆ ಸರ್ವಾನುಮತದಿಂದ ನಿರ್ಧಾರ ಕೈಗೊಳ್ಳಲಾಗಿದೆ. ಸಮ್ಮೇಳನದ ದಿನಾಂಕ ಇನ್ನೂ ನಿಗದಿಯಾಗಿಲ್ಲ. ಆರು ತಿಂಗಳ ಮೊದಲೇ ಅಧ್ಯಕ್ಷರನ್ನು ಘೋಷಿಸುವ ಕನ್ನಡ ಸಾಹಿತ್ಯ ಪರಿಷತ್ ನಡೆಗೆ ಆಕ್ಷೇಪ ಕೂಡ ವ್ಯಕ್ತವಾಗಿತ್ತು.
ಈ ಬಾರಿಯ ಸಾಹಿತ್ಯ ಸಮ್ಮೇಳನಾಧ್ಯಕ್ಷರ ಆಯ್ಕೆ ಕನ್ನಡ ಸಾಹಿತ್ಯ ಪರಿಷತ್ ಇತಿಹಾಸದಲ್ಲಿಯೇ ಹೊಸ ಪರಂಪರೆಗೆ ನಾಂದಿ ಹಾಡಿದಂತಾಗಿದೆ. ಸಮ್ಮೇಳನ ನಡೆಯುವ ಸ್ಥಳ ಮತ್ತು ದಿನಾಂಕ ಅಂತಿಮವಾಗಿಲ್ಲ. ಸ್ವಾಗತ ಸಮಿತಿ ರಚನೆಯಾಗಿಲ್ಲ. ಸರ್ಕಾರದಿಂದ ಅನುದಾನ ಕೂಡ ಖಾತ್ರಿಯಾಗಿಲ್ಲ. ಬಳ್ಳಾರಿಯಲ್ಲಿ ಡಿಸೆಂಬರ್ ನಲ್ಲಿ ಸಮ್ಮೇಳನ ನಡೆಸಲು ನಿರ್ಧರಿಸಲಾಗಿದ್ದರೂ ಸ್ಥಳ, ದಿನಾಂಕ, ಸಮಿತಿಗಳ ಬಗ್ಗೆ ನಿರ್ಧಾರವಾಗಿಲ್ಲ. ಆದಕ್ಕೂ ಮೊದಲೇ ಸಮ್ಮೇಳನಾಧ್ಯಕ್ಷರನ್ನು ಆಯ್ಕೆ ಮಾಡಲಾಗಿದೆ