ಬೆಂಗಳೂರು: ಬಂಡೀಪುರ ಹುಲಿ ಸಂರಕ್ಷಣ ಪ್ರದೇಶದಲ್ಲಿರುವ ಅವ್ಯವಸ್ಥೆ ಮತ್ತು ವಾಚರ್ ಗಳಿಗೆ ಸಂಬಳ ನೀಡದೇ ಇರುವುದನ್ನು ಪ್ರಶ್ನಿಸಿದ ವನ್ಯಜೀವಿ ತಜ್ಞ ಜೋಸೆಫ್ ಹೂವರ್ ಅವರಿಗೆ ಅರಣ್ಯಾಧಿಕಾರಿಗಳಿಬ್ಬರು ಬೆದರಿಕೆ ಹಾಕಿದ ಆರೋಪ ಕೇಳಿ ಬಂದಿದೆ.
ಈ ಕುರಿತಾಗಿ ಜೋಸೆಫ್ ಹೂವರ್ ಅವರು ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಬಂಡೀಪುರ ಹುಲಿ ಸಂರಕ್ಷಣಾ ಪ್ರದೇಶದ ನಿರ್ದೇಶಕ ಪ್ರಭಾಕರನ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನವೀನ್ ವಿರುದ್ಧ ಪೊಲೀಸರು ಎನ್.ಸಿ.ಆರ್. ಪ್ರಕರಣ ದಾಖಲಿಸಿದ್ದಾರೆ.
ಅರಣ್ಯ ಇಲಾಖೆಯಲ್ಲಿ ವಾಚರ್ ಗಳಿಗೆ ವೇತನ ನೀಡುತ್ತಿಲ್ಲ. ಮೂಲಸೌಕರ್ಯ ಕಲ್ಪಿಸಿಲ್ಲ ಎನ್ನುವ ಕುರಿತಾಗಿ ವಿಡಿಯೋದಲ್ಲಿ ಮಾತನಾಡಿದ್ದೆ. ಇದಕ್ಕೆ ಇಬ್ಬರು ಅಧಿಕಾರಿಗಳು ದೂರವಾಣಿ ಕರೆ ಮಾಡಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಜೋಸೆಫ್ ಹೂವರ್ ದೂರು ನೀಡಿದ್ದಾರೆ.