ಬೆಂಗಳೂರು: ಕುರಿ ಮೇಯಿಸುವ ವಿಚಾರಕ್ಕೆ ಆರಂಭವಾದ ಗಲಾಟೆ ವ್ಯಕ್ತಿಯ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಂಗಳೂರಿನ ಅಮೃತಹಳ್ಳಿ ವ್ಯಾಪ್ತಿಯಲ್ಲಿ ನಡೆದಿದೆ.
ಅಂಜಿನಪ್ಪ (35) ಕೊಲೆಯಾದ ವ್ಯಕ್ತಿ. ಕುರಿ ಮೇಯಿಸುವ ವಿಚಾರವಾಗಿ ಹಿಂದೆ ಆರಂಭವಾಗಿದ್ದ ಜಗಳದ ವಿಚಾರವಾಗಿ ಹಳೇ ದ್ವೇಷದಲ್ಲಿ ವ್ಯಕ್ತಿಯನ್ನು ಕೊಲೆ ಮಾಡಲಾಗಿದೆ.
ಪ್ರಕರನ ಸಂಬಂಧ ಅಪ್ರಾಪ್ತ ಸೇರಿ ಮೂವರು ಆರೋಪಿಗಳನ್ನು ಅಮೃತಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಪ್ರೇಮ್, ದರ್ಶನ್ ಹಾಗೂ ಇನ್ನೋರ್ವ ಅಪ್ರಾಪ್ತ ಆರೋಪಿಯನ್ನು ಬಂಧಿಸಲಾಗಿದೆ.