ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
32 ವರ್ಷದ ವಾಸು ಕೊಲೆಯಾದ ಮೃತ ಎಂದು ಹೇಳಲಾಗಿದೆ. ಇಬ್ಬರು ಪರಿಚಯಸ್ಥರು ಮಚ್ಚಿನಿಂದ ಆತನನ್ನು ಕೊಚ್ಚಿ ಕೊಂದಿದ್ದಾರೆ. ಅಕ್ರಮ ಸಂಬಂಧದ ಶಂಕೆಯಿಂದ ಕೊಲೆ ಮಾಡಿರಬಹುದು ಎನ್ನಲಾಗಿದ್ದು, ಇನ್ನೂ ದೃಢಪಟ್ಟಿಲ್ಲ. ಕುಂಸಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.