ಮೈಸೂರು: ವಿ. ಸೋಮಣ್ಣರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ನೀಡಿದರೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಬಿಜೆಪಿ ಹಿರಿಯ ಮುಖಂಡ ತೋಟದಪ್ಪ ಬಸವರಾಜ್ ಎಚ್ಚರಿಕೆ ನೀಡಿದ್ದಾರೆ.
ಅಧಿಕಾರಕ್ಕಾಗಿ ಹೊರಗಿನಿಂದ ಬಂದವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಿದರೆ ಬಿಜೆಪಿಗಾಗಿ ದುಡಿದ ಕಾರ್ಯಕರ್ತರಿಗೆ ಅಪಮಾನ ಮಾಡಿದಂತಾಗುತ್ತದೆ. ಸೋಮಣ್ಣ ಅವರು ವರುಣಾದಲ್ಲಿ ಸೋತ ನಂತರ ಕಾರ್ಯಕರ್ತರನ್ನು ನಿಂದಿಸಿದ್ದಾರೆ. ಒಂದು ಮತಕ್ಕೆ 2000 ರೂ. ನೀಡಿ ಮತದಾರರನ್ನು ಭ್ರಷ್ಟಾಚಾರಿಗಳಾಗಿ ಮಾಡಿದ್ದಾರೆ ಎಂದು ದೂರಿದ್ದಾರೆ.
ಸೋಮಣ್ಣ ತಮ್ಮ ಸ್ವಯಂಕೃತ ಅಪರಾಧದಿಂದ ಸೋಲನ್ನು ಅನುಭವಿಸಿದರು. ವಿಜಯೇಂದ್ರ ಬಗ್ಗೆ ಹಗುರವಾಗಿ ಮಾತನಾಡಿದ್ದು ಅವರ ಸೋಲಿಗೆ ಕಾರಣವಾಯಿತು ಎಂದು ಹೇಳಿದ್ದಾರೆ.
ಒಮ್ಮೆ ಅಧ್ಯಕ್ಷರಾದವರು ಮೂರು ವರ್ಷಗಳವರೆಗೆ ಇರುತ್ತಾರೆ. ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ವಿಜಯೇಂದ್ರ ಅವಧಿ ಇನ್ನು ಮುಗಿದಿಲ್ಲ. ಅವಧಿಗೂ ಮುನ್ನ ವಿಜಯೇಂದ್ರ ಬದಲಾವಣೆ ಸಾಧ್ಯವಿಲ್ಲ. ಬದಲಾವಣೆ ಮಾಡಿದರೆ ಶ್ರೀರಾಮಲು ಅಥವಾ ತೇಜಸ್ವಿನಿ ರಾಜ್ಯಾಧ್ಯಕ್ಷರಾಗಲಿ ಎಂದು ಮೈಸೂರಿನ ಬಿಜೆಪಿ ಹಿರಿಯ ಮುಖಂಡ ತೋಟದಪ್ಪ ಬಸವರಾಜ್ ಹೇಳಿದ್ದಾರೆ.