ತುಮಕೂರು : ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಕಾರಿಗೆ ಕ್ಯಾಂಟರ್ ಡಿಕ್ಕಿಯಾಗಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ. ತುಮಕೂರು ಜಿಲ್ಲೆಯ ಕುಣಿಗಲ್ ಬೈಪಾಸ್ ಬಳಿ ಈ ಅಪಘಾತ ಸಂಭವಿಸಿದೆ.
ಮೃತರನ್ನು ಸೀಬೇಗೌಡ, ಶೋಭಾ, ದುಂಬಿಶ್ರೀ ಮತ್ತು ಭಾನು ಕಿರಣ್ ಗೌಡ ಎಂದು ಗುರುತಿಸಲಾಗಿದೆ. ಮಗನನ್ನು ಹಾಸ್ಟೆಲ್ ಗೆ ಬಿಟ್ಟು ಬರುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.
ಮೃತರು ರಾಮನಗರದ ಮಾಗಡಿ ತಾಲೂಕಿನ ಮತ್ತಿಕೆರೆಯವರು. ಯೂಟರ್ನ್ ತೆಗೆದುಕೊಳ್ಳುವಾಗ ಕಾರಿಗೆ ಕ್ಯಾಂಟರ್ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕಾರಿನಲ್ಲಿದ್ದ ನಾಲ್ವರು ಕೂಡ ಮೃತಪಟ್ಟಿದ್ದಾರೆ. ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣ ಜಖಂ ಆಗಿದೆ.ಈ ಸಂಬಂಧ ಕುಣಿಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
You Might Also Like
			TAGGED:ಭೀಕರ ಅಪಘಾತ		
		
 
			 
		 
		 
		 
		 Loading ...
 Loading ... 
		 
		