ಬಾಗಲಕೋಟೆ: ಕುಡಿದ ಮತ್ತಿನಲ್ಲಿ ಸ್ನೇಹಿತರಿಬ್ಬರ ನಡುವೆ ಜಗಳವಾಗಿದ್ದು, ಓರ್ವನ ಕೊಲೆ ಮಾಡಿದ ಘಟನೆ ಬಾಗಲಕೋಟೆ ತಾಲೂಕಿನ ಬೆನಕಟ್ಟಿ ಗ್ರಾಮದ ಸಮೀಪ ನಡೆದಿದೆ.
ಗುದ್ದಲಿಯಿಂದ ಹೊಡೆದು ಮಾಲತೇಶ ದಾಸಪ್ಪನವರ(32) ಅವರನ್ನು ಕೊಲೆ ಮಾಡಲಾಗಿದೆ. ಕೊಲೆ ಆರೋಪಿ ಚಿನ್ನಪ್ಪ ಬೆನ್ನೂರನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮಾಲತೇಶ ಅವರ ಕಾರ್ ಅನ್ನು ಮಾರಾಟ ಮಾಡಿಸಿದ್ದ ಆರೋಪಿ ಚಿನ್ನಪ್ಪ ಬಂದ ಹಣವನ್ನು ಮಾಲತೇಶನಿಗೆ ಕೊಟ್ಟಿರಲಿಲ್ಲ. ಹಣ ಕೊಡುವಂತೆ ಕೇಳಿದಾಗ ಇಬ್ಬರ ನಡುವೆ ಗಲಾಟೆಯಾಗಿ ಹತ್ಯೆ ಮಾಡಲಾಗಿದೆ. ಬಾಗಲಕೋಟೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.