BREAKING: ಭೀಕರ ಅಪಘಾತ: ವಚನಾನಂದ ಶ್ರೀ ಸಹೋದರ ದುರ್ಮರಣ!

ಬೆಳಗಾವಿ: ಭೀಕರ ಬೈಕ್ ಅಪಘಾತದಲ್ಲಿ ಯೋಗ ಗುರು ಹಾಗು ಹರಿಹರ ಪೀಠದ ಶ್ರೀವಚನಾನಂದ ಸ್ವಾಮೀಜಿಯವರ ಸಹೋದರ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಠಣಿ ತಾಲೂಕಿನಲ್ಲಿ ನಡೆದಿದೆ.

ಅಥಣಿಯ ಭರಮಕೋಡಿ ಬಳಿ ಬೈಕ್ ಅಪಘಾತಕ್ಕೀಡಾಗಿ ವಚನಾನಂದ ಶ್ರೀಗಳ ಸಹೋದರ ಸಾವನ್ನಪ್ಪಿದ್ದಾರೆ. ಅಶೋಕ್ ಗೌರಗೊಂಡ ಮೃತ ದುರ್ದೈವಿ.

ಅಥಣಿಯ ತಾಂವಶಿ ಮೂಲದ ಅಶೋಕ್, ತಾಂವಶಿ ಗ್ರಾಮದಿಂದ ಅಥಣಿ ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದರು. ಈ ವೇಳೆ ಬೈಕ್ ಗೆ ನಾಯಿಯೊಂದು ಅಡ್ಡ ಬಂದಿದೆ. ನಾಯಿ ತಪ್ಪಿಸಲು ಹೋಗಿ ಬೈಕ್ ಅಪಘಾತಕ್ಕೀಡಾಗಿದ್ದು, ಅಶೋಕ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅಶೋಕ್, ತಾಯಿ, ಪತ್ನಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ. ಸಾಮಾಜಿಕ ಕಳಕಳಿಯುಳ್ಳ ವ್ಯಕ್ತಿಯಾಗಿದ್ದ ಅಶೋಕ್ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳನ್ನು ಕೂಡ ಹೊಂದಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read