SHOCKING NEWS: ಮಗನ ಸಾವಿನ ಸುದ್ದಿ ಕೇಳಿ ಆಘಾತಗೊಂಡ ತಾಯಿ ಹೃದಯಾಘಾತದಿಂದ ಸಾವು!

ಬೀದರ್: ಅಪಘಾತದಲ್ಲಿ ಮಗ ಸಾವನ್ನಪ್ಪಿದ ಸುದ್ದಿ ಕೇಳಿ ಆಘಾತಕ್ಕೊಳಗಾದ ತಾಯಿ ಹೃದಯಾಘತಾದಿಂದ ಸಾವನ್ನಪ್ಪಿರುವ ಘಟನೆ ಬೀದರ್ ನಲ್ಲಿ ನಡೆದಿದೆ.

ಬೀದರ್ ತಾಲೂಕಿನ ಘೋಡಂಪಳ್ಳಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಲಕ್ಷ್ಮೀಕಾಂತ್ ಜೋಶಿ ಅಲಿಯಾಸ್ ಕಾಂತರಾಜು (45) ಹಾಗೂ ತಾಯಿ ಶಾರದಾಬಾಯಿ (86) ಮೃತರು. ಒಂದೇ ದಿನ ತಾಯಿ-ಮಗ ಇಬ್ಬರೂ ಇಹಲೋಕ ತ್ಯಜಿಸಿದ್ದಾರೆ.

ಘೋಡಂಪಳ್ಳಿ ರಸ್ತೆಯಲ್ಲಿ ಬೈಕ್ ಅಪಘಾತದಲ್ಲಿ ಮಗ ಕಾಂತರಾಜು ಸಾವನ್ನಪ್ಪಿದ್ದರು. ಈ ವಿಷಯ ತಿಳಿದ ತಾಯಿ ಶಾರದಾಬಾಯಿ ತೀವ್ರವಾಗಿ ನೊಂದಿದ್ದರು. ಮಗನ ಸಾವಿನ ಸುದ್ದಿ ಕೇಳಿ ಕೆಲವೇ ಸಮಯದಲ್ಲಿ ತಾಯಿ ಶಾರದಾಬಾಯಿ ಕೂಡ ಸಾವನ್ನಪ್ಪಿದ್ದಾರೆ. ಮನೆಯಲ್ಲಿ ಒಂದೇ ದಿನ ಇಬ್ಬರ ಅಗಲಿಕೆ ಕುಟುಂಬಕ್ಕೆ ಮತ್ತೊಂದು ಆಘಾತ ತಂದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read