ವಿಜಯನಗರ : ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ದಂಪತಿ ಸ್ಥಳದಲ್ಲೇ ಮೃತಪಟ್ಟು, ಮೂವರು ಮಕ್ಕಳಿಗೆ ಗಂಭೀರ ಗಾಯಗಳಾದ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿಯಲ್ಲಿ ನಡೆದಿದೆ.
ಮೃತರನ್ನು ಚಾಲಕ ಮುತ್ತಪ್ಪ ಪೂಜಾರ್ (35) ಹಾಗೂ ಪತ್ನಿ ರೇಣುಕಾ (30) ಎಂದು ಗುರುತಿಸಲಾಗಿದೆ. ಮಕ್ಕಳಾದ ಅನುಶ್ರೀ(9) ರೂಪಶ್ರೀ (6) ಖುಷಿ (4) ಗೆ ಗಾಯಗಳಾಗಿದೆ. ಮೃತರು ಬಾಗಲಕೋಟೆ ಮೂಲದ ಚೆಟ್ನಿಹಾಳು ಗ್ರಾಮದವರು ಎಂದು ಗುರುತಿಸಲಾಗಿದೆ.
ಬೆಂಗಳೂರಿನಲ್ಲಿ ಮುತ್ತಪ್ಪ ಕ್ಯಾಬ್ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜು ಗುಜ್ಜಾಗಿದೆ, ಗಾಯಗೊಂಡ ಮಕ್ಕಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.