BIG NEWS : ರಾಜ್ಯದಲ್ಲಿ ಹೃದಯಾಘಾತ ಪ್ರಕರಣ ಹೆಚ್ಚಳ : ಸಚಿವ ಈಶ್ವರ್ ಖಂಡ್ರೆ ಮಹತ್ವದ ಸೂಚನೆ

ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ರಾಜ್ಯದಾದ್ಯಂತ, ವಿಶೇಷವಾಗಿ ಯುವಜನರಲ್ಲಿ ಹಠಾತ್ ಹೃದಯಾಘಾತಗಳು ಸಂಭವಿಸುತ್ತಿರುವುದು ಚಿಂತಾಜನಕ ಸಂಗತಿ. ಇಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿ ಈ ಗಂಭೀರ ಸಮಸ್ಯೆ ಕುರಿತು ಸಚಿವ ಈಶ್ವರ್ ಖಂಡ್ರೆ ಸಭೆ ನಡೆಸಿದರು.

ಬದಲಾಗುತ್ತಿರುವ ಆಹಾರ ಪದ್ಧತಿ, ಜೀವನಶೈಲಿ, ತೀವ್ರ ಮನೋಒತ್ತಡ, ನಿದ್ರೆಯ ಕೊರತೆ, ಮತ್ತು ಅತಿಯಾದ ಮೊಬೈಲ್ ಬಳಕೆ ಇತ್ಯಾದಿ ಅಂಶಗಳು ಈ ಪ್ರವೃತ್ತಿಗೆ ಕಾರಣವಾಗುತ್ತಿರುವುದಾಗಿ ತಾತ್ಕಾಲಿಕವಾಗಿ ಅಂದಾಜಿಸಲಾಗಿದೆ. ಇದನ್ನು ತಡೆಗಟ್ಟಲು ಹಾಗೂ ಮುಂದಿನ ಪೀಳಿಗೆಗೆ ಆರೋಗ್ಯಕರ ಜೀವನವನ್ನ ಒದಗಿಸಲು ಅವಶ್ಯಕ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದು ಸಚಿವರು ಹೇಳಿದರು.

* ಹೃದಯ ಆರೈಕೆ ಕುರಿತ ಜಾಗೃತಿ ಅಭಿಯಾನಳನ್ನು ಹಮ್ಮಿಕೊಳ್ಳುವುದು.
* ಉಚಿತ ಹೃದಯ ಸಂಬಂಧಿ ಆರೋಗ್ಯ ತಪಾಸಣೆ.
* ಜಿಲ್ಲೆ, ತಾಲೂಕು, CHC, PHC ಮಟ್ಟದ ಆಸ್ಪತ್ರೆಗಳಲ್ಲಿ ಹೃದಯ ಸಂಬಂಧಿತ ತಾಂತ್ರಿಕ ಸೌಲಭ್ಯಗಳನ್ನು ಹೆಚ್ಚಿಸುವುದು.
* ಜನರ ಆರೋಗ್ಯಕ್ಕೆ ಧಕ್ಕೆಯಾಗುವ ಯಾವುದೇ ಅಂಶವನ್ನು ನಿರ್ಲಕ್ಷಿಸದೇ, ತಕ್ಷಣ ಕಾರ್ಯಚರಣೆ ಕೈಗೊಳ್ಳಲು ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಸನ್ನದ್ಧರಾಗಿರುವಂತೆ ನಿರ್ದೇಶನ ನೀಡಿದೆ ಎಂದು ಮಾಹಿತಿ ನೀಡಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read