ಕಾರವಾರ: ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ವರುಣಾರ್ಭಟಕ್ಕೆ ಜನಜೀವನ ಅಸ್ತವ್ಯಸ್ಥಗೊಂಡಿದೆ. ಹಲವೆಡೆ ಭೂಕುಸಿತ, ಗುಡ್ದ ಕುಸಿತ ಸಂಭವಿಸಿದೆ.
ನಿರಂತರವಾಗಿ ಸುರಿಯುತ್ತಿರುವ ಮಳೆಯ ಅಬ್ಬರಕ್ಕೆ ಕರ್ನಾಟಕ-ಗೋವಾ ರಾಷ್ಟ್ರೀಯ ಹೆದ್ದಾರಿ ಕುಸಿತಗೊಂಡಿದೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಅನಮೋಡ ಬಳಿ ಈ ಘಟನೆ ನಡೆದಿದೆ.
ಕರ್ನಾಟಕದಿಂದ ಗೋವಾ ರಾಜ್ಯಕ್ಕೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿದಿದೆ. ರಸ್ತೆ ಮಾರ್ಗದಲ್ಲಿಯೂ ಬಿರುಕುವುಂಟಾಗಿದೆ. ನಿಧಾನಗತಿಯಲ್ಲಿ ವಾಹನಗಳು ತೆರಳಲು ಅನುವು ಮಾಡಿಕೊಡಲಾಗಿದೆ. ವಾಹನ ಸವಾರರು ಈ ಭಾಗದಲ್ಲಿ ಆತಂಕದಲ್ಲಿಯೇ ಸಂಚರಿಸುವ ಸ್ಥಿತಿ ಎದುರಾಗಿದೆ.
ಕರ್ನಾಟಕ ಹಾಗೂ ಗೋವಾ ಪೊಲೀಸರು ಸ್ಥಳಕ್ಕೆ ಭೇತಿ ನೀಡಿ ಪರಿಶೀಲನೆ ನಡೆಸಿದ್ದಾರೆ.