ಕೋಲಾರ : ಮದುವೆಯಾಗಿದ್ರೂ ಪರ ಪುರುಷನ ಸಂಗ ಮಾಡಿ ಮಹಿಳೆಯೋರ್ವಳು ವಂಚನೆಗೆ ಒಳಗಾದ ಘಟನೆ ಕೋಲಾರದಲ್ಲಿ ನಡೆದಿದೆ.
ಶ್ರೀನಿವಾಸಪುರ ಪಟ್ಟಣದ ಸುಭಾಶ್ ನಗರದ ಯುವಕ ವಂಚಿಸಿದ್ದಾನೆ ಎಂದು ತಿಮ್ಮಸಂದ್ರ ಗ್ರಾಮದ ಮಹಿಳೆ ಆರೋಪಿಸಿದ್ದಾರೆ. ಮಹಿಳೆ ಸದ್ಯ 5 ತಿಂಗಳ ಗರ್ಭಿಣಿಯಾಗಿದ್ದು, ಮದುವೆಗೆ ನಿರಾಕರಿಸಿದ್ದಾನೆ ಎಂದು ಮಹಿಳೆ ಹೇಳಿದ್ದಾಳೆ.
ಗಂಡನನ್ನು ಬಿಟ್ಟು ಆತನ ಸ್ನೇಹಿತನ ಜೊತೆ ಓಡಿ ಹೋದ ಮಹಿಳೆ ಇದೀಗ ತಲೆ ಮೇಲೆ ಕೈ ಹೊತ್ತು ಕುಳಿತಿದ್ದಾಳೆ. ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಮಹಿಳೆ ಅಂಬೇಡ್ಕರ್ ಫೋಟೋ ಹಿಡಿದು ಯುವಕನ ಮನೆ ಮುಂದೆ ಪ್ರತಿಭಟನೆ ನಡೆಸಿದ್ದಾಳೆ. ನನಗೆ ನ್ಯಾಯ ಬೇಕು ಎಂದು ಆಕೆ ಹಠ ಹಿಡಿದು ಕೂತಿದ್ದಾಳೆ.
You Might Also Like
TAGGED:ಕೋಲಾರ