ರಾಜ್ಯದಲ್ಲಿ ಶಿಕ್ಷಕರು, ಶಿಕ್ಷಣ ಇಲಾಖೆಯ ಸಿಬ್ಬಂದಿಯ ಆನ್ಲೈನ್ ಹಾಜರಾತಿಗೆ ಚಾಲನೆ ನೀಡಲಾಗಿದೆ. ಇನ್ನು ಮುಂದೆ ಖೊಟ್ಟಿ ಹಾಜರಾತಿಗೆ ತಡೆ ಬೀಳಲಿದೆ ಎಂದು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಶಾಲೆ ತಲುಪಿದ ಬಳಿಕ ಶಿಕ್ಷಕರು ಆನ್ಲೈನ್ ಹಾಜರಾತಿ ಹಾಕಬೇಕು. ಇದರಿಂದ ಸಮಯಕ್ಕೆ ಸರಿಯಾಗಿ ಶಿಕ್ಷಕರು ಶಾಲೆಗೆ ಬರುತ್ತಾರೆ. ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ನೆರವಾಗಲಿದೆ. ಶೀಘ್ರವೇ ರಾಜ್ಯದಲ್ಲಿನ 57 ಲಕ್ಷ ವಿದ್ಯಾರ್ಥಿಗಳ ಮುಖ ಚಹರೆ ಆಧರಿಸಿ ಆನ್ಲೈನ್ ಹಾಜರಾತಿ ವ್ಯವಸ್ಥೆ ಜಾರಿ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.