SHOCKING : ರಾಜ್ಯದಲ್ಲಿ ಮತ್ತೊಂದು ‘ರಾಕ್ಷಸಿ ಕೃತ್ಯ’ : ಗಬ್ಬದ ಹಸು ಕಡಿದು ವಿಕೃತಿ , 6 ಮಂದಿ ಆರೋಪಿಗಳು ಅರೆಸ್ಟ್.!


ಚಿಕ್ಕಮಗಳೂರು : ರಾಜ್ಯದಲ್ಲಿ ಮತ್ತೊಂದು ರಾಕ್ಷಸಿ ಕೃತ್ಯ ನಡೆದಿದ್ದು, ಗಬ್ಬದ ಹಸು ಕಡಿದು ದುರುಳರು ವಿಕೃತಿ ಮೆರೆದಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಎಸ್ಟೇಟ್ ಒಂದರಲ್ಲಿ ಅಸ್ಸಾಂ ಮೂಲದ ಕಾರ್ಮಿಕರು ಈ ಕೃತ್ಯ ಎಸಗಿದ್ದಾರೆ. ಗಬ್ಬದ ಹಸು ಕಡಿದು ನಂತರ ಅಂಗಾಗಗಳನ್ನು ಹೂಳಲು ಯತ್ನಿಸಿದ್ದಾರೆ. ಮೂಡಿಗೆರೆ ತಾಲೂಕಿನ ಬಾಳೂರು ಹೋಬಳಿ ನಿಡುವಾಳೆ ಗ್ರಾಮ ಪಂಚಾಯಿತಿ ವ್ಯಾಪ್ತಿ ಮರ್ಕಲ್ ಎಸ್ಟೇಟ್ ನಲ್ಲಿ ಈ ಘಟನೆ ನಡೆದಿದೆ.

ಘಟನೆ ಸಂಬಂಧ ಎಲ್ಲಾ 6 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ತೋಟದ ಇನ್ನೊಬ್ಬ ಕೆಲಸಗಾರ ಕೃತ್ಯದ ಬಗ್ಗೆ ಸುಳಿವು ನೀಡಿದ್ದು, ಬಳಿಕ ಪೊಲೀಸರು ಕಾರ್ಯಾಚರಣೆ ನಡೆಸಿ 45 ಕೆಜಿ ಹಸುವಿನ ಮಾಂಸ ವಶ ಪಡೆದುಕೊಂಡಿದ್ದಾರೆ. ಹಾಗೂ 6 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read