ಬೆಂಗಳೂರು: ಸಿಗಂದೂರು ಸೇತುವೆ ಉದ್ಘಾಟನೆಯಲ್ಲಿ ಶಿಷ್ಟಾಚಾರ ಪಾಲನೆ ಎನ್ನುವುದು ಒಂದು ನೆಪ. ಸಿಎಂ ಸಿದ್ದರಾಮಯ್ಯ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ನಡುವೆ ಅಡ್ಜೆಸ್ಟ್ ಮೆಂಟ್ ಆಗಿತ್ತು ಎಂದು ಬಿಜೆಪಿ ಶಾಸಕ ಬಸನ ಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ಸಿಗಂದೂರು ಸೇತುವೆ ಉದ್ಘಾಟನೆಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಬರಬೇಡಿ ಎಂದಿದ್ದೇ ಬಿ.ಎಸ್.ಯಡಿಯೂರಪ್ಪ. ಇಬ್ಬರ ನಡುವೆ ಅಡ್ಜಸ್ಟ್ ಮೆಂಟ್ ಆಗಿತ್ತು ಎಂದಿದ್ದಾರೆ.
ಸೇತುವೆ ಉದ್ಘಾಟನೆಗೆ ನೀವೂ ಬರುವುದು ಬೇಡ ನಿಮ್ಮವರೂ ಬರುವುದು ಬೇಡ ಎಂದು ಯಡಿಯೂರಪ್ಪ ಹೇಳಿದ್ದರು. ತಮ್ಮ ಮಧ್ಯೆ ಅಡ್ಜಸ್ಟ್ ಮೆಂಟ್ ಇಲ್ಲ ಎಂದು ತೋರಿಕೆಗಷ್ಟೇ ನಾಟಕ ಮಾಡುತ್ತಿದ್ದಾರೆ. ಈ ಮೂಲಕ ತಮ್ಮ ಮಗ ರಾಜ್ಯಾಧ್ಯಕ್ಷನಾಗಿ ಮುಂದುವರೆಯಲಿ ಎಂಬುದೇ ಅವರ ಉದ್ದೇಶ ಎಂದರು.
ಈ ಅಪ್ಪ-ಮಗನಿಗೂ, ಸಿದ್ದರಾಮಯ್ಯನವರಿಗೂ ಹೊಂದಾಣಿಕೆ ಇದೆ. ಬಿಜೆಪಿ ರಾಜ್ಯಾಧ್ಯಕ್ಷನಾಗಿಯೂ ವಿಜಯೇಂದ್ರ ಮುಂದುವರೆಯುತ್ತಾರೆ. ಮುಂದೆ ಅಮೆರಿಕಾ ಅಧ್ಯಕ್ಷರೂ ಆಗುತ್ತಾರೆ ಎಂದು ವ್ಯಂಗ್ಯವಾಡಿದ್ದಾರೆ.