BREAKING: ಶಾಲಾ ವಾಹನದಿಂದ ಬಿದ್ದು ವಿದ್ಯಾರ್ಥಿ ಸಾವು

ಬೆಂಗಳೂರು: ಶಾಲಾ ವಾಹನದಿಂದ ಬಿದ್ದು ಎರಡನೇ ತರಗತಿ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ಬೆಂಗಳೂರು ದಕ್ಷಿಣ ಜಿಲ್ಲೆ ಮಾಗಡಿ ತಾಲೂಕಿನ ಹುಚ್ಚಹನುಮಗೌಡನ ಪಾಳ್ಯ ಗ್ರಾಮದ ಬಳಿ ಘಟನೆ ನಡೆದಿದೆ.

7 ವರ್ಷದ ರಜತ್ ಸಾವನ್ನಪ್ಪಿದ ಬಾಲಕ ಎಂದು ಹೇಳಲಾಗಿದೆ. ಮಾಗಡಿ ತಾಲೂಕಿನ ಜನತಾ ಕಾಲೋನಿಯ ನಿವಾಸಿಯಾಗಿರುವ ಬಾಲಕ ಖಾಸಗಿ ಶಾಲಾ ವಾಹನದಿಂದ ಬಿದ್ದು ಮೃತಪಟ್ಟಿದ್ದಾನೆ. ಸಂಜೆ ಶಾಲೆ ಮುಗಿಸಿಕೊಂಡು ಮನೆಗೆ ಬರುವಾಗ ದುರ್ಘಟನೆ ಸಂಭವಿಸಿದೆ. ಮಾಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read