BREAKING : ಚಿಕ್ಕಮಗಳೂರಿನಲ್ಲಿ ಪ್ರವಾಸಿಗರಿದ್ದ ಖಾಸಗಿ ಬಸ್ ಪಲ್ಟಿಯಾಗಿ 25 ಮಂದಿಗೆ ಗಾಯ : ಇಬ್ಬರ ಸ್ಥಿತಿ ಗಂಭೀರ.!

ಚಿಕ್ಕಮಗಳೂರು : ಖಾಸಗಿ ಬಸ್ ಪಲ್ಟಿಯಾಗಿ 25 ಮಂದಿಗೆ ಗಾಯಗೊಂಡು, ಇಬ್ಬರ ಸ್ಥಿತಿ ಗಂಭೀರವಾದ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ದೇವಲ ಗೂಲ್ ಗ್ರಾಮದ ಬಳಿ ನಡೆದಿದೆ.

ಬೆಂಗಳೂರಿನಿಂದ ಪ್ರವಾಸಕ್ಕೆ ಬಂದಿದ್ದ ಖಾಸಗಿ ಬಸ್ ಪಲ್ಟಿಯಾಗಿದೆ. ಬೆಂಗಳೂರಿನಿಂದ ಕುದುರೆಮುಖ ಪ್ರವಾಸಕ್ಕೆ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ.

ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದ್ದು, 40 ಕ್ಕೂ ಹೆಚ್ಚು ಯುವಕ ಯುವತಿಯರು ಟ್ರಕ್ಕಿಂಗ್ ಗೆ ಬಂದಿದ್ದರು.ಪರಿಣಾಮ 25 ಮಂದಿಗೆ ಗಾಯಗಳಾಗಿದ್ದು  ಇಬ್ಬರ ಸ್ಥಿತಿ ಗಂಭೀರವಾಗಿದೆ, ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read