ಕೊಪ್ಪಳ: ಧರ್ಮಸ್ಥಳದ ಮಂಜುನಾಥ ಸ್ವಾಮಿ ದರ್ಶನಕ್ಕೆ ಹೋಗಿದ್ದ ಶಿಕ್ಷಕರೊಬ್ಬರು ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ನಾಲ್ಕು ದಿನಗಳ ಹಿಂದೆ ಧರ್ಮಸ್ಥಳಕ್ಕೆ ತೆರಳಿದ್ದ ಕುಷ್ಟಗಿ ತಾಲೂಕಿನ ಜುಮಲಾಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕ ಬಸವರಾಜ ಪೊಲೀಸ್ ಪಾಟೀಲ(35) ಜುಲೈ 20ರಂದು ಧರ್ಮಸ್ಥಳದ ಸಮೀಪ ಶವವಾಗಿ ಪತ್ತೆಯಾಗಿದ್ದಾರೆ.
ಮೂಲತಃ, ಮುದೇನೂರು ಇದ್ಲಾಪುರ ಗ್ರಾಮದ ಬಸವರಾಜ ಒಂದೂವರೆ ವರ್ಷದಿಂದ ಜಮಲಾಪುರ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಭಾನುವಾರ ಧರ್ಮಸ್ಥಳದ ನೇತ್ರಾವತಿ ಸೇತುವೆಯ ಕೆಳಭಾಗ ಹಳೆಯ ರಸ್ತೆಯಲ್ಲಿ ಅವರ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.