ರೈತರಿಗೆ ಗುಡ್ ನ್ಯೂಸ್ :  ವಿವಿಧ ಯೋಜನೆಯಡಿ ಸಹಾಯಧನ ಪಡೆಯಲು  ಅರ್ಜಿ ಆಹ್ವಾನ

ಶಿವಮೊಗ್ಗ : ಮೀನುಗಾರಿಕಾ ಇಲಾಖೆಯಿಂದ 2022-23 ರಿಂದ 2024-25 ನೇ ಸಾಲಿನವರೆಗೆ ಮರು ಹಂಚಿಕೆಯಾಗಿರುವ ಪ್ರಧಾನಮಂತ್ರಿ ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ವಿವಿಧ ಘಟಕಗಳಿಗೆ ಸಹಾಯಧನ ನೀಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಮೀನು ಕೃಷಿಕೊಳಗಳ ನಿರ್ಮಾಣ ಒಟ್ಟು 4.03 ಹೆಕ್ಟೇರ್ಗೆ ಸಾಮಾನ್ಯರಿಗೆ 2.39 ಹೆಕ್ಟೇರ್ ಮತ್ತು ಪರಿಶಿಷ್ಟ ಜಾತಿಗೆ 1.64 ಹೆಕ್ಟೇರ್ ಗುರಿ ನೀಡಲಾಗಿದೆ.ಮೀನುಕೃಷಿ ಕೊಳ ನಿರ್ಮಾಣ ಮಾಡಿ ಮೀನು ಕೃಷಿ ಕೈಗೊಂಡವರಿಗೆ ಹೂಡಿಕೆಗಳ ವೆಚ್ಚದ ಮೇಲೆ ಸಹಾಯಕ್ಕೆ ಒಟ್ಟು 8.60 ಹೆಕ್ಟೇರ್ ಸಾಮಾನ್ಯರಿಗೆ 4.80, ಸಾಮಾನ್ಯ ಮಹಿಳೆಗೆ 1.80, ಪರಿಶಿಷ್ಟ ಜಾತಿಗೆ 1.00, ಪರಿಶಿಷ್ಟ ಪಂಗಡಕ್ಕೆ 1.00 ಹೆಕ್ಟೇರ್ ಗುರಿ ನೀಡಲಾಗಿದೆ.

ಯಾಂತ್ರೀಕೃತ ದೋಣಿ ಖರೀದಿಗೆ ಸಹಾಯ, ಮೀನುಮರಿ ಪಾಲನಾ ಘಟಕ ನಿರ್ಮಾಣದ ಬಗ್ಗೆ ಸಹಾಯಕ್ಕೆ ಒಟ್ಟು 7.198 ಹೆಕ್ಟೇರ್ ಸಾಮಾನ್ಯರಿಗೆ 2.03, ಮಹಿಳೆಯರಿಗೆ 2.228, ಪರಿಶಿಷ್ಟ ಜಾತಿಗೆ 1.00 ಹಾಗೂ ಪರಿಶಿಷ್ಟ ಪಂಗಡಕ್ಕೆ 1.94 ಹೆಕ್ಟೇರ್ ಗುರಿ, ಸೈಕಲ್ ವಿತ್ ಐಸ್ ಬಾಕ್ಸ್ ಸಾಮಾನ್ಯ ವರ್ಗಕ್ಕೆ 1 ಗುರಿ, ಮಧ್ಯಮ ವರ್ಗದ ಅಲಂಕಾರಿಕ ಸಾಕಾಣಿಕ ಘಟಕದಲ್ಲಿ ಪರಿಶಿಷ್ಟ ಜಾತಿಗೆ 1 ಗುರಿ, ಹೊಸತಾದ ಮೀನುಮಾರಾಟ ಕಿಯೋಸ್ಕ್ ನಿರ್ಮಾಣ ಸಹಾಯಕ್ಕಾಗಿ ಪರಿಶಿಷ್ಟ ಜಾತಿಗೆ 1 ಘಟಕಗಳ ಗುರಿ ನೀಡಲಾಗಿದೆ.

ಸಹಾಯಧನ ಘಟಕಗಳ ಉಪಯೋಜನೆಗಳನ್ನು ಪಡೆಯಲು ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಶೇ.40 ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಮಹಿಳಾ ಫಲಾನುಭವಿಗಳಿಗೆ ಶೇ. 60 ರಷ್ಟು ಸಹಾಯಧನ ನೀಡಲಾಗುತ್ತದೆ.

ಆಸಕ್ತರು ಆ.20 ರೊಳಗೆ ಆಯಾ ತಾಲ್ಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯಿಂದ ಅರ್ಜಿಯನ್ನು ಪಡೆದು ಸಂಬಂಧಪಟ್ಟ ತಾಲ್ಲೂಕಿನ ಮೀನುಗಾರಿಕೆ ಸಹಾಯ ನಿರ್ದೇಶಕರ ಕಚೇರಿಗೆ ಪೂರ್ಣ ದಾಖಲೆಗಳೊಂದಿಗೆ ಸಲ್ಲಿಸಬೇಕು ಎಂದು ಮೀನುಗಾರಿಕೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read