ರಾಜ್ಯದ ರೈತರಿಗೆ ಗುಡ್ ನ್ಯೂಸ್ : ‘ಕುಸುಮ್-ಬಿ’ ಯೋಜನೆಯಡಿ ‘ಸೋಲಾರ್ ಪಂಪ್ ಸೆಟ್’ ಅಳವಡಿಕೆಗೆ ಶೇ. 80 ರಷ್ಟು ಸಬ್ಸಿಡಿ

ಬೆಂಗಳೂರು : ರಾಜ್ಯದ ರೈತರಿಗೆ ಕುಸುಮ್-ಬಿ’ ಯೋಜನೆಯಡಿ ಸೋಲಾರ್ ಪಂಪ್ ಸೆಟ್ ಅಳವಡಿಕೆಗೆ ಶೇ. 80 ರಷ್ಟು ಸಬ್ಸಿಡಿ ನೀಡಲಾಗುತ್ತಿದ್ದು, ಆಸಕ್ತರು ಇದರ ಪ್ರಯೋಜನ ಪಡೆಯಬಹುದಾಗಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕುಸುಮ್ ಬಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು ಹೀಗಿದೆ.

  • ಕುಸುಮ್ ಬಿ ಯೋಜನೆಯಡಿ ಸೋಲಾರ್ ಕೃಷಿ ಪಂಪ್ಸೆಟ್ ಅಳವಡಿಸಲು, ಕೇಂದ್ರ ಸರ್ಕಾರ ಶೇ.30, ರಾಜ್ಯ ಸರ್ಕಾರ ಶೇ.50ರಷ್ಟು ಸಬ್ಸಿಡಿ ಒದಗಿಸುತ್ತಿದ್ದು, ಫಲಾನುಭವಿಗಳು ಶೇ.20ರಷ್ಟು ಭರಿಸಬೇಕಿದೆ.
  • ಈ ಯೋಜನೆಯಡಿ 40 ಸಾವಿರ ಪಂಪ್ ಸೆಟ್ ಗಳಿಗೆ ಅನುಮೋದನೆ ನೀಡಲಾಗಿದ್ದು, ಇದನ್ನು ಅನುಷ್ಠಾನಗೊಳಿಸುವ ಬಗ್ಗೆ ಶೀಘ್ರ ಕ್ರಮ ಕೈಗೊಳ್ಳಬೇಕು.
  • 25ಸಾವಿರ ರೈತರು ಹೆಚ್ಚುವರಿಯಾಗಿ ಕುಸುಮ್ ಬಿ ಯೋಜನೆಯಡಿ ಅರ್ಜಿ ಸಲ್ಲಿಸಿದ್ದಾರೆ. ಯೋಜನೆಯಡಿ ರಾಜ್ಯ ಸರ್ಕಾರ 752 ಕೋಟಿ ರೂ. ವೆಚ್ಚ ಮಾಡಲಿದೆ. ಯೋಜನೆ ಸಮರ್ಪಕ ಅನುಷ್ಠಾನಗೊಳಿಸಿದ ಬಳಿಕ ಸಬ್ಸಿಡಿ ಮೊತ್ತ ಕಡಿಮೆಯಾಗಲಿದೆ.
  • ರೈತರಿಗೆ ಸ್ವಯಂ ವಿದ್ಯುತ್ ಮೂಲಸೌಕರ್ಯ ಕಲ್ಪಿಸಲು ಅವಕಾಶ ಕಲ್ಪಿಸಲಾಗುತ್ತಿದ್ದು, ಟ್ರಾನ್ಸ್ ಫಾರ್ಮರ್ ಗಳನ್ನು ಇಲಾಖೆ ಒದಗಿಸಲಿದೆ.
  • ನೀರಾವರಿ ಪಂಪ್ ಸೆಟ್ ಗಳಿಗೆ 2024-25ರ ಸಾಲಿನಲ್ಲಿ 12,785 ಕೋಟಿ ರೂಪಾಯಿಗಳ ಅನುದಾನ ಹಂಚಿಕೆ ಆಗಿದ್ದು, ಫೆಬ್ರವರಿ 2025 ವರೆಗೆ ರೂ. 11,720 ಕೋಟಿ ಬಿಡುಗಡೆ ಆಗಿದೆ. 2025-26ರಲ್ಲಿ 16,021 ಕೋಟಿ ರೂಪಾಯಿಗಳ ಆಯವ್ಯಯ ಹಂಚಿಕೆ ಆಗಿದೆ.
Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read