BREAKING: ಸರ್ಕಾರ ಮಾತುಕತೆ ನಡೆಸದಿದ್ದರೆ ಮುಷ್ಕರ ಫಿಕ್ಸ್: ಆಗಸ್ಟ್ 5ರಿಂದ ಬಸ್ ಗಳು ರಸ್ತೆಗಿಳಿಯಲ್ಲ: ಅಖಿಲ ಕರ್ನಾಟಕ ರಸ್ತೆ ಸಾರಿಗೆ ನೌಕರರ ಎಚ್ಚರಿಕೆ

ಹುಬ್ಬಳ್ಳಿ: ಸಾರಿಗೆ ನೌಕರರು ಮುಷ್ಕರಕ್ಕೆ ಮುಂದಾಗದಂತೆ ರಾಜ್ಯ ಸರ್ಕಾರ ಎಸ್ಮಾ ಜಾರಿಗೊಳಿಸಿದ ಬೆನ್ನಲ್ಲೇ ಅಖಿಲ ಕರ್ನಾಟಕ ಸಾರಿಗೆ ನೌಕರ ಮಹಾಮಂಡಳ ಮಹ್ತವದ ಸಭೆ ನಡೆಸಿದ್ದು, ರಾಜ್ಯ ಸರ್ಕಾರಕ್ಕೆ ನೋಟಿಸ್ ಮೂಲಕ ಎಚ್ಚರಿಕೆ ನೀಡಿದೆ.

ಹುಬ್ಬಳ್ಳಿಯಲ್ಲಿ ಸಭೆ ನಡೆಸಿರುವ ಅಖಿಲ ಕರ್ನಾಟಕ ಸಾರಿಗೆ ನೌಕರ ಮಹಾಮಂಡಲ, ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ. ಸರ್ಕಾರ ಸಾರಿಗೆ ನೌಕರ ಸಂಘದ ಜೊತೆ ಮಾತುಕತೆ ನಡೆಸದಿದ್ದರೆ ಮುಷ್ಕರ ನಡೆಸುವುದು ಖಚಿತ ಎಂದು ತಿಳಿಸಿದೆ.

ಈ ಬಗ್ಗೆ ಸರ್ಕಾರಕ್ಕೆ ನೋಟಿಸ್ ಕೂಡ ನೀಡಿದೆ. ರಾಜ್ಯ ಸರ್ಕಾರ ಸಾರಿಗೆ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಮಾತುಕತೆ ನಡೆಸಿ ಚರ್ಚೆ ನಡೆಸಬೇಕು. ಇಲ್ಲವಾದಲ್ಲಿ ಆಗಸ್ಟ್ 5ರಿಂದ ರಾಜ್ಯಾದ್ಯಂತ ಒಂದೇ ಒಂದು ಬಸ್ ಕೂಡ ರಸ್ತೆಗೆ ಇಳಿಯಲ್ಲ. ಇದು ಖಚಿತ. ಎಲ್ಲಾ ಸಾರಿಗೆ ನಿಗಮಗಳ ನೌಕರರು ಆಗಸ್ಟ್ 5ರಿಂದ ಅನಿರ್ದಿಷ್ಟಾವದಿ ಮುಷ್ಕರ ನಡೆಸಲಿದ್ದಾರೆ ಎಂದು ಎಚ್ಚರಿಕೆ ನೀಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read