SHOCKING: ಔಷಧ ಎಂದು ತಿಳಿದು ವಿಷ ಸೇವಿಸಿದ್ದ ಪೊಲೀಸ್ ಸಾವು

ಮಂಗಳೂರು: ಔಷಧ ಎಂದು ತಿಳಿದು ಇಲಿ ಪಾಷಾಣ ಸೇವಿಸಿದ ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಮಂಜುನಾಥ ಹೆಗ್ಡೆ(44) ಮೃತಪಟ್ಟವರು.

ಮಂಜುನಾಥ ಹೆಗ್ಡೆ ಅವರು ಅನಾರೋಗ್ಯದ ಸಮಸ್ಯೆಗೆ ಸಂಬಂಧಿಸಿದಂತೆ ಆಯುರ್ವೇದ ಔಷಧ ಸೇವಿಸುತ್ತಿದ್ದರು. ಆದರೆ ಆಕಸ್ಮಿಕವಾಗಿ ಔಷಧ ಎಂದು ತಿಳಿದು ಇಲಿ ಪಾಷಾಣ ಸೇವಿಸಿದ್ದಾರೆ. ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಹರೇಕಳ ಮೂಲದವರಾದ ಮಂಜುನಾಥ ಹೆಗ್ಡೆ ಸುರತ್ಕಲ್ ನಲ್ಲಿ ವಾಸವಾಗಿದ್ದರು. ಅವರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read