ರಾಜ್ಯದ ರೈತರಿಗೆ ಗುಡ್ ನ್ಯೂಸ್: ಬೆಂಬಲ ಬೆಲೆಯಡಿ ರಾಗಿ, ಭತ್ತ ಸೇರಿ 14 ಬೆಳೆ ಖರೀದಿ

ಬೆಂಗಳೂರು: ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ಬೆಲೆ ಸ್ಥಿರೀಕರಣ ಸಮಿತಿ ಎಂ.ಎಸ್.ಪಿ. ಯೋಜನೆಯಡಿ 2025 -26 ನೇ ಸಾಲಿನಲ್ಲಿ ರೈತರು ಬೆಳೆದ 14 ಬೆಳೆಗಳನ್ನು ಕನಿಷ್ಠ ಬೆಂಬಲ ಬೆಲೆಯಡಿ ಖರೀದಿಸಲು ತೀರ್ಮಾನ ಕೈಗೊಂಡಿದೆ.

ಉತ್ಪನ್ನಗಳ ಖರೀದಿ ಸಂಬಂಧ ಸೆಪ್ಟೆಂಬರ್ ನಲ್ಲಿ ನೋಂದಣಿ ಪ್ರಕ್ರಿಯೆ ಆರಂಭವಾಗಲಿದೆ. ಈ ಬಾರಿ ಬೆಳೆ ಕಟಾವು ಮಾಡಿದ ಕೂಡಲೇ ಖರೀದಿ ಪ್ರಕ್ರಿಯೆ ನಡೆಸುವುದರಿಂದ ರೈತರ ಬೆಳೆಗಳಿಗೆ ಮಾರುಕಟ್ಟೆ ಖಾತರಿ ಆರಂಭದಲ್ಲಿ ಸಿಗುತ್ತದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ರಾಜ್ಯದ ಸುಮಾರು 7 ಲಕ್ಷಕ್ಕೂ ಅಧಿಕ ರೈತರಿಂದ 15 ಲಕ್ಷ ಮೆಟ್ರಿಕ್ ಟನ್ ಉತ್ಪನ್ನಗಳನ್ನು 8,000 ಕೋಟಿ ರೂ. ವೆಚ್ಚದಲ್ಲಿ ಖರೀದಿಸಲಾಗುವುದು.

ಈ ವರ್ಷ 6 ಲಕ್ಷ ಮೆಟ್ರಿಕ್ ಟನ್ ರಾಗಿ ಖರೀದಿಗೆ ನಿರ್ಧರಿಸಲಾಗಿದೆ. ಪ್ರತಿ ರೈತರಿಂದ ಗರಿಷ್ಠ 50 ಕ್ವಿಂಟಾಲ್ ರಾಗಿ ಖರೀದಿಗೆ ತೀರ್ಮಾನಿಸಿದೆ. ಪ್ರತಿ ಕ್ವಿಂಟಾಲ್ ಗೆ 4886 ರೂಪಾಯಿ ನಿಗದಿಪಡಿಸಲಾಗಿದೆ. ಕಳೆದ ವರ್ಷಕ್ಕಿಂತ 596 ರೂಪಾಯಿ ಹೆಚ್ಚಳ ಮಾಡಲಾಗಿದೆ. ಸೆಪ್ಟಂಬರ್ ನಿಂದ ನೋಂದಣಿ ಆರಂಭಿಸಲಾಗುವುದು. ಜನವರಿಯಿಂದ ಮಾರ್ಚ್ ವರೆಗೂ ಖರೀದಿ ನಡೆಯಲಿದೆ ಎಂದು ಹೇಳಿದ್ದಾರೆ.

3 ಲಕ್ಷ ಮೆಟ್ರಿಕ್ ಟನ್ ಭತ್ತ ಖರೀದಿಗೆ ತೀರ್ಮಾನಿಸಿದ್ದು, ಸೆಪ್ಟಂಬರ್ ನಿಂದ ನೋಂದಣಿ ಆರಂಭವಾಗಲಿದೆ. ನವೆಂಬರ್, ಡಿಸೆಂಬರ್ ನಲ್ಲಿ ಖರೀದಿಸಲಾಗುವುದು, ಪ್ರತಿ ಕ್ವಿಂಟಾಲ್ ಭತ್ತಕ್ಕೆ 2369 ರೂ. ಬೆಂಬಲ ಬೆಲೆ ನಿಗದಿ ಮಾಡಲಾಗಿದೆ. ಈ ವರ್ಷ 69 ರೂ. ಹೆಚ್ಚಳ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

3 ಲಕ್ಷ ಮೆಟ್ರಿಕ್ ಟನ್ ಬಿಳಿ ಜೋಳ ಖರೀದಿಗೆ ನಿರ್ಧರಿಸಿದ್ದು, ಪ್ರತಿ ಕ್ವಿಂಟಾಲ್ ಗೆ 3669 ರೂ. ನೀಡಲು ತೀರ್ಮಾನಿಸಲಾಗಿದೆ. ಕಳೆದ ವರ್ಷಕ್ಕಿಂತ 328 ರೂಪಾಯಿ ಹೆಚ್ಚುವರಿಯಾಗಿ ನೀಡಲಾಗುತ್ತಿದೆ. ಅಕ್ಟೋಬರ್ ನಿಂದ ನೋಂದಣಿ ಪ್ರಾರಂಭವಾಗಲಿದೆ. ಡಿಸೆಂಬರ್ ನಿಂದ ಮಾರ್ಚ್ ವರೆಗೆ ಖರೀದಿಸಲಾಗುವುದು ಎಂದು ಹೇಳಿದ್ದಾರೆ.

ಇದೇ ಮೊದಲ ಬಾರಿಗೆ ಸಾಮೆ, ನವಣೆ, ಹಾರಕ ಇತರೆ ಸಿರಿಧಾನ್ಯಗಳ ಖರೀದಿಗೆ ನಿರ್ಧರಿಸಲಾಗಿದೆ. ಎಂ.ಎಸ್.ಪಿ. 4886 ರೂ. ಜೊತೆಗೆ ಸರ್ಕಾರದಿಂದ 114 ರೂಪಾಯಿ ಸೇರಿ ಪ್ರತಿ ಕ್ವಿಂಟಾಲ್ ಗೆ 5,000 ರೂ. ದರದಲ್ಲಿ ಮಿತಿ ಇಲ್ಲದೇ ಖರೀದಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read