ರೈತರಿಗೆ ಗುಡ್ ನ್ಯೂಸ್: ಆಧಾರ್, ಪಹಣಿ ಜೆರಾಕ್ಸ್ ನೀಡಿ ರಸಗೊಬ್ಬರ ಪಡೆದುಕೊಳ್ಳಿ

ಕೊಪ್ಪಳ ನಗರದ ಗಂಜ್ ಸರ್ಕಲ್ ಆವರಣದಲ್ಲಿ ಇರುವ ತಾಲೂಕ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘ ನಿಯಮಿತ, ಸೊಸೈಟಿಯಲ್ಲಿ ಆಗಸ್ಟ್ 11ರ ಸೋಮವಾರದಂದು ಯೂರಿಯಾ ರಸಗೊಬ್ಬರದ ವಿತರಣೆ ಮಾಡಲಾಗುತ್ತಿದೆ.

ಯೂರಿಯಾ ಖರೀದಿಸಲು ಇಚ್ಛಿಸುವ ರೈತರು ಕಡ್ಡಾಯವಾಗಿ ಜಮೀನು ಹೊಂದಿರುವ ರೈತನ ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿ ಹಾಗೂ ಜಮೀನಿನ ಪಹಣಿ ಜೆರಾಕ್ಸ್ ಪ್ರತಿ ತರಬೇಕು.

ಕುಟುಂಬದ ಒಬ್ಬ ಸದಸ್ಯರಿಗೆ ಮಾತ್ರ ಯೂರಿಯಾ ರಸಗೊಬ್ಬರ ವಿತರಣೆ ಮಾಡಲಾಗುವುದು. ಈ ಹಿಂದೆ ಯೂರಿಯಾ ರಸಗೊಬ್ಬರ ಖರೀದಿಸಿದ ರೈತರಿಗೆ ಪುನಃ ಯೂರಿಯಾ ರಸಗೊಬ್ಬರ ವಿತರಿಸುವುದಿಲ್ಲ. ರೈತರ ಹೆಸರಿನಲ್ಲಿ ವಂಚನೆ ಎಸಗುವವರಿಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕೊಪ್ಪಳ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read