ಬೆಂಗಳೂರು : ಧರ್ಮಸ್ಥಳದಲ್ಲಿ ಅಸ್ಥಿಪಂಜರಕ್ಕೆ ಎಸ್ ಐ ಟಿ ವ್ಯಾಪಕ ಶೋಧ ನಡೆಸುತ್ತಿರುವ ಬೆನ್ನಲ್ಲೇ ಬಿಜೆಪಿ ಧರ್ಮಸ್ಥಳ ಚಲೋಗೆ ಕರೆ ನೀಡಿದೆ.
ಹೌದು, ಭಾನುವಾರ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ನೇತೃತ್ವದಲ್ಲಿ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಉಡುಪಿ, ಮಂಗಳೂರು ಶಾಸಕರು ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದು, ಮಂಜುನಾಥನಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿದ್ದಾಗಿ ದೂರುದಾರ ತಪ್ಪೊಪ್ಪಿಗೆ ಹೇಳಿಕೆ ಹಿನ್ನೆಲೆಯಲ್ಲಿ ಎಸ್ ಐಟಿ ತಂಡ ತನಿಖೆ ಚುರುಕುಗೊಳಿಸಿದೆ. ದೂರುದಾರ ತೋರಿಸುತ್ತಿರುವ ವಿವಿಧ ಜಾಗಗಳಲ್ಲಿ ಮಣ್ಣು ಅಗೆದು ಅಸ್ಥಿಪಂಜರಕ್ಕಾಗಿ ಶೋಧ ನಡೆಸಲಾಗುತ್ತಿದೆ. ಈ ನಡುವೆ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ನಡೆಸಲಾಗುತ್ತಿದೆ ಎಂದು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಜನರು ಪ್ರತಿಭಟನೆ ನಡೆಸುತ್ತಿದ್ದಾರೆ.ಅಪಪ್ರಚಾರ ನಡೆಸುವ ಮೂಲಕ ಧರ್ಮಸ್ಥಳ ಕ್ಷೇತ್ರದ ಬಗ್ಗೆ ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟು ಮಾಡಲಾಗುತ್ತಿದೆ ಎಂದು ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.