ಹುದ್ದೆ ಖಾಲಿ ಇಲ್ಲವೆಂದು ಅನುಕಂಪದ ಉದ್ಯೋಗ ನಿರಾಕರಿಸುವಂತಿಲ್ಲ: ಹೈಕೋರ್ಟ್ ಆದೇಶ

ಬೆಂಗಳೂರು: ಹುದ್ದೆ ಖಾಲಿ ಇಲ್ಲವೆಂಬ ಕಾರಣಕ್ಕೆ ಅನುಕಂಪ ಆಧಾರದ ಮೇಲೆ ಉದ್ಯೋಗ ನಿರಾಕರಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ.

ನಿರ್ದಿಷ್ಟ ಅನುದಾನಿತ ಕಾಲೇಜಿನಲ್ಲಿ ಉದ್ಯೋಗ ಖಾಲಿ ಇಲ್ಲವೆಂಬ ಕಾರಣಕ್ಕೆ ಅನುಕಂಪ ಆಧಾರದ ಮೇಲೆ ನೌಕರಿ ನಿರಾಕರಿಸಲು ಸಾಧ್ಯವಿಲ್ಲವೆಂದು ಹೈಕೋರ್ಟ್ ಆದೇಶ ನೀಡಿದೆ.

ಬಾಗಲಕೋಟೆಯ ಅನುದಾನಿತ ಆದರ್ಶ ಪಿಯು ಕಾಲೇಜಿನಲ್ಲಿ ಎಫ್.ಡಿ.ಎ. ನೌಕರರಾಗಿದ್ದ ತಂದೆ ಮೃತಪಟ್ಟ ಹಿನ್ನೆಲೆಯಲ್ಲಿ ಅನುಕಂಪ ಆಧಾರದಲ್ಲಿ ನೌಕರಿ ನೀಡಲು ಕೋರಿ ಸಂತೋಷ್ ಯಮನಪ್ಪ ಸಲ್ಲಿಸಿದ್ದ ಮನವಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಹುದ್ದೆ ಖಾಲಿ ಇಲ್ಲ ಎಂದು ಹಿಂಬರಹ ನೀಡಿದ್ದು, ಇದನ್ನು ಪ್ರಶ್ನಿಸಿ ಸಂತೋಷ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಪೀಠ ಹುದ್ದೆ ಈ ಆದೇಶ ನೀಡಿದೆ.

ಹುದ್ದೆ ಖಾಲಿ ಇಲ್ಲ ಎಂಬ ಕಾರಣಕ್ಕೆ ಮನವಿ ತಿರಸ್ಕರಿಸಲಾಗುವುದಿಲ್ಲ. ಇತರೆ ಅನುದಾನಿತ ಸಂಸ್ಥೆಗಳಲ್ಲಿ ಹಂಚಿಕೆ ಮಾಡಬೇಕು ಎಂದು ತಿಳಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read