ಧರ್ಮಸ್ಥಳದಲ್ಲಿ ನೂರಾರು ಶವ ಹೂತಿಟ್ಟ ಬಗ್ಗೆ ಸುಳ್ಳು ಮಾಹಿತಿ: ವಕೀಲ ಮಂಜುನಾಥ್ ವಿರುದ್ಧ ಕೇಸ್ ದಾಖಲು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಲಾಗಿದೆ ಎಂಬ ಬಗ್ಗೆ ಸುಳ್ಳು ಮಾಹಿತಿ ನೀಡಿದ ವಕೀಲ ಮಂಜುನಾಥ್ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಧರ್ಮಸ್ಥಳ ನಿವಾಸಿ ರಘುರಾಮ ಶೆಟ್ಟಿ ಎಂಬುವರು ದೂರು ನೀಡಿದ್ದು ಈ ದೂರನ್ನು ಆಧರಿಸಿ ವಕೀಲ ಮಂಜುನಾಥ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಯಥೇಚ್ಛವಾಗಿ ಹೆಣಗಳನ್ನು ಹೂತು ಹಾಕಿದ್ದಾನೆ ಎಂದು ವಕೀಲ ಮಂಜುನಾಥ್ ಮಾಧ್ಯಮ ಪ್ರಕಟಣೆ ನೀಡಿದ್ದರು. ಪಾಯಿಂಟ್ 1ರಲ್ಲಿ 2, ಪಾಯಿಂಟ್ 2ರಲ್ಲಿ 3, ಪಾಯಿಂಟ್ 4 ಮತ್ತು 5ರಲ್ಲಿ ತಲಾ 8 ಹೆಣಗಳು, ಪಾಯಿಂಟ್ 9ರಲ್ಲಿ 6ರಿಂದ 7 ಹೆಣಗಳು, ಪಾಯಿಂಟ್ 13ರಲ್ಲಿ ಯಥೇಚ್ಛವಾಗಿ ಹೆಣಗಳನ್ನು ಹೂತಿದ್ದಾನೆ ಎಂದು ಮಾಧ್ಯಮ ಪ್ರಕಟಣೆ ನೀಡಿದ್ದರು. ಧರ್ಮಸ್ಥಳದಲ್ಲಿ ನಡೆಯುತ್ತಿರುವ ಎಸ್ಐಟಿ ತನಿಖೆ ಬಗ್ಗೆ ಅನಧಿಕೃತ ಮಾಹಿತಿಗಳನ್ನು ಒಳಗೊಂಡ ಸುಳ್ಳು ಪತ್ರಿಕಾ ಪ್ರಕಟಣೆ ಪ್ರಸಾರ ಮಾಡಿದ ಆರೋಪದ ಮೇಲೆ ವಕೀಲ ಮಂಜುನಾಥ್ ಅವರ ಕೇಸ್ ದಾಖಲಿಸಲಾಗಿದೆ.  

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read