ಕಲಬುರಗಿ: ಗುಟ್ಕಾ ತಿನ್ನಬೇಡ ಎಂದು ಅಜ್ಜಿ ಬುದ್ಧಿವಾದ ಹೇಳಿದ್ದಕ್ಕೆ ಮೊಮ್ಮಗ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಕರ್ಜಗಿ ಗ್ರಾಮದಲ್ಲಿ ಶನಿವಾರ ನಡೆದಿದೆ.
ರೋಹಿತ್ ಆತ್ಮಹತ್ಯೆ ಮಾಡಿಕೊಂಡ ಬಾಲಕ. 9ನೇ ತರಗತಿ ಓದುತ್ತಿದ್ದ ರೋಹಿತ್ ಗುಟ್ಕಾ ತಿನ್ನುತ್ತಿದ್ದ. ಅಜ್ಜಿ ದಮಯಂತಿ ಏಳೆಂಟು ವರ್ಷಗಳಿಂದ ಮೊಮ್ಮಗನನ್ನು ಸಾಕಿ ಸಲಹಿ ಶಿಕ್ಷಣ ಕೊಡಿಸುತ್ತಿದ್ದರು. ಮೊಮ್ಮಗ ಗುಟ್ಕಾ ತಿನ್ನುವ ವಿಚಾರ ಆತನ ಸ್ನೇಹಿತರೆ ತಿಳಿದುಕೊಂಡ ಅಜ್ಜಿ, ಗುಟ್ಕಾ ತಿನ್ನಬೇಡ ಆರೋಗ್ಯ ಹಾಳಾಗುತ್ತದೆ ಎಂದು ಬುದ್ಧಿವಾದ ಹೇಳಿದ್ದಾರೆ.
ಅಜ್ಜಿ ಬುದ್ಧಿಮಾತು ಹೇಳಿದ್ದಕ್ಕೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಲಕ ರೋಹಿತ್ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.