ಬೀದರ್: ಗೂಡ್ಸ್ ವಾಅಹನ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ತಾಯಿ ಹಾಗೂ ಮಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಉಮಾಪುರ ಗ್ರಾಮದಲ್ಲಿ ನಡೆದಿದೆ.
ಬೋಸ್ಲಾ ಗ್ರಾಮದ ತುಕ್ಕಮ್ಮ ಕಿಶನ್ (56) ಹಾಗೂ ಮಗಳು ಸುರೇಖಾ ಗುಂಡಪ್ಪ (30) ಮೃತರು. ಮಹಾರಾಷ್ಟ್ರದಿಂದ ಸ್ವಗ್ರಾಮಕ್ಕೆ ಹಿಂತಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಹಾಲಿನ ಗೂಡ್ಸ್ ವಾಹನ ಬೈಕ್ ಗೆ ದಿಕ್ಕಿ ಹೊಡೆದಿದೆ.
ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಸವಕಲ್ಯಾಣ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.