BREAKING: ಟಾಟಾ ಏಸ್- ಬೈಕ್ ಭೀಕರ ಅಪಘಾತ: ಶಾಸಕ ಸಿ.ಪಿ.ಯೋಗೇಶ್ವರ್ ಸಂಬಂಧಿ ಸಾವು

ಚನ್ನಪಟ್ಟಣ: ಟಾಟಾ ಏಸ್- ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಶಾಸಕ ಸಿ.ಪಿ.ಯೋಗೇಶ್ವರ್ ಸಂಬಂಧಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆ ಚನ್ನಪಟ್ಟಣದ ಬಳಿ ನಡೆದಿದೆ.

ತಿಟ್ಟಮಾರನಹಳ್ಳಿ ಬಳಿ ಈ ಅಪಘಾತ ಸಂಭವಿಸಿದೆ. ಶಿವಲಿಂಗಯ್ಯ (57) ಮೃತರು. ಶಿವಲಿಂಗಯ್ಯ ಶಾಸಕ ಸಿ.ಪಿ.ಯೋಗೇಶ್ವರ್ ದೊಡ್ಡಪ್ಪನ ಮಗಳ ಪತಿ ಎಂದು ತಿಳಿದುಬಂದಿದೆ.

ಅಪಘಾತದಲ್ಲಿ ಶಿವಲಿಂಗಯ್ಯ ಅವರ ತಲೆ ಹಾಗೂ ಕಾಲಿಗೆ ಗಂಭೀರವಾದ ಗಾಯಗಳಾಗಿತ್ತು. ಅವರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಮಾರ್ಗಮಧ್ಯೆಯೇ ಸಾವನ್ನಪ್ಪಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read