BIG NEWS: ಬಟ್ಟೆ ಖರೀದಿಗೆ ಅಂಗಡಿಗೆ ಬಂದಿದ್ದ ವಿದ್ಯಾರ್ಥಿ: ಹೃದಯಾಘಾತದಿಂದ ಕುಸಿದು ಬಿದ್ದು ಸಾವು

ಮಂಡ್ಯ: ಗೌರಿ-ಗಣೇಶ ಹಬ್ಬಕ್ಕೆಂದು ಬಟ್ಟೆ ಖರೀದಿಗೆ ಅಂಗಡಿಗೆ ಬಂದಿದ್ದ ಪಿಯುಸಿ ವಿದ್ಯಾರ್ಥಿಯೊಬ್ಬ ಏಕಾಏಕಿ ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.

ಚಿರಾಗ್ (17) ಮೃತ ವಿದ್ಯಾರ್ಥಿ. ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ. ಹಬ್ಬಕ್ಕೆ ಬಟ್ಟೆ ಖರೀದಿಗಾಗಿ ತಂದೆ-ತಾಯಿ ಜೊತೆ ಅಂಗಡಿಗೆ ಹೋಗಿದ್ದ. ಈ ವೇಳೆ ಏಕಾಏಕಿ ಕುಸಿದು ಬಿದ್ದಿದ್ದಾನೆ. ತಕ್ಷಣ ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಮಾರ್ಗ ಮಧ್ಯೆಯೇ ಚಿರಾಗ್ ಸಾವನ್ನಪ್ಪಿದ್ದಾನೆ.

ಹಬ್ಬದ ಸಂಭ್ರಮದಲ್ಲಿದ್ದ ಪೋಷಕರು ಮಗನನ್ನು ಕಳೆದುಕೊಂಡು ಕಂಗಾಲಾಗಿದ್ದಾರೆ. ಕುಟುಂಬದ ಆಕ್ರಂದನ ಮುಗಿಲುಮುಟ್ಟಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read